ಬಾಗಲಕೋಟೆ | ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಡಿವಿಪಿ ಒತ್ತಾಯ

Date:

ದೇಶಕ್ಕೆ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಶಿವರಾಜ್ ಒತ್ತಾಯಿಸಿದರು.

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಹೋಬಳಿ ಉಪ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಡಿವಿಪಿ ತಾಲೂಕು ಅಧ್ಯಕ್ಷ ವಿನೋದ ಕಲಾದಗಿ ಮಾತನಾಡಿ, “ಒಲಂಪಿಕ್ಸ್‌ನಲ್ಲಿ ದೇಶಕ್ಕೆ, ಚಿನ್ನದ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳ ಮೇಲೆನ ಲೈಂಗಿಕ ಕಿರುಕುಳದ ವಿರುದ್ಧ ಪಟುಗಳೇ ಹಲವಾರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಅದು ನೂತನ ಸಂಸತ ಭವನ ಉದ್ಘಾಟನೆ ದಿನದಂದು ಬೆಳಕಿಗೆ ಬಂದಿದೆ. ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟವರ ಪರಿಸ್ಥಿತಿಯೇ ಹೀಗಾದರೆ ಇನ್ನು ಜನಸಾಮಾನ್ಯರ ಪರಿಸ್ಥಿತಿ ಯಾವ ಲೆಕ್ಕ. ಪ್ರಧಾನ ಮಂತ್ರಿಯವರು ಹೇಳುವ ಬೇಟಿ ಬಚಾವೋ ಬೇಟಿ ಪಡಾವೋ ಎಲ್ಲಿದೆ ಎಂಬುದು ಸಂಶಯ ಮೂಡಿಸುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

“ಘಟನೆಯ ವಿರುದ್ಧ ರೈತ ಸಮುದಾಯ ಸಂಯುಕ್ತ ಕಿಸಾನ್ ಮೋರ್ಚಾ ದೇಶ ವ್ಯಾಪ್ತಿ ಹೋರಾಟಕ್ಕೆ ಕರೆ ನೀಡಿದ್ದು, ಮಹಿಳಾ ಆತ್ಮ ಗೌರವಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಆದ ಕಾರಣ ಲೈಂಗಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನಿನ ಕ್ರಮ ತೆಗೆದುಕೊಂಡು ಕುಸ್ತಿ ಪಟುಗಳಿಗೆ ನ್ಯಾಯ ದೊರಕಿಸಿ ಕೊಡಬೇಕು” ಎಂದು ಡಿವಿಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ ಕಲಾದಗಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಮಂಜುನಾಥ ಹೊಸಮನಿ, ರಾಜು ಹೊಸಮನಿ, ಸಾಗರ್ ದಂಡಿನ್, ಅಭಿಷೇಕ್ ಕೋಳಿ, ಲಕ್ಷ್ಮಣ್ ತಳವಾರ್, ಬಸವರಾಜ್ ಮಾದರ್, ಮಾಂತೇಶ್ ಮೈತ್ರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...