ಬಾಗಲಕೋಟೆ | ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ: ಎಸ್‌ಐಒ ಆಗ್ರಹ

Date:

Advertisements

ಬಾಗಲಕೋಟೆ ಜಿಲ್ಲೆಗೆ ಘೋಷಣೆಯಾಗಿರುವ ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ ಎಂದು ಎಸ್‌ಐಒ ಕಾರ್ಯಕರ್ತರು ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನಡೆಸಿದ್ದು, “ಬಾಗಲಕೋಟೆ ಜಿಲ್ಲೆಗೆ ಜಿಲ್ಲೆಗೆ ಶೈಕ್ಷಣಿಕ ವಿಷಯದಲ್ಲಿ ನಿರಂತರ ತಾರತಮ್ಯ ಮಾಡಲಾಗುತ್ತಿದ್ದು, ಆಯಾ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅನೇಕ ಬಾರಿ ಜಿಲ್ಲೆಗೆ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಘೋಷಣೆಗಳನ್ನು ಮಾಡುತ್ತಿವೆಯೋ ಹೊರತು ಈವರೆಗೆ ಯಾವುದೇ ರೀತಿಯ ಅನುದಾನಗಳನ್ನು ನೀಡಿಲ್ಲ. ಅವೆಲ್ಲವೂ ಕೇವಲ ಚುನಾವಣಾ ಪ್ರೇರಿತ ಆಶ್ವಾಸನೆಗಳಾಗಿದ್ದವು ಎಂಬುದು ದಶಕದ ರಾಜಕೀಯ ವಿದ್ಯಮಾನದಿಂದ ಸಾಬೀತಾಗುತ್ತಿದೆ, ಜಿಲ್ಲೆಯ ಜನಪ್ರತಿನಿಧಿಗಳ ದಿಟ್ಟ ಧ್ವನಿ ಹಾಗೂ ಒಗ್ಗಟ್ಟಿನ ಕೊರತೆಯಿಂದಾಗಿ ಜನತೆಯ ಬಹುದಿನಗಳ ಬೇಡಿಕೆಗಳು ನನೆಗುದಿಗೆ ಬಿದ್ದಿವೆ” ಎಂದು ಸಂಘಟನಾಕಾರರು ಹೇಳಿದರು.

“ಬಾಗಲಕೋಟೆಗೆ 2014-15ರ ಬಜೆಟ್‌ನಲ್ಲಿ ಘೋಷಿಸಿದ್ದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸುಮಾರು 10 ವರ್ಷಗಳು ಕಳೆದರೂ ಈವರೆಗೆ ಯಾವುದೇ ರೀತಿಯ ಅನುದಾನ ಒದಗಿಸಿಲ್ಲ ಮತ್ತು ಮೆಡಿಕಲ್ ಕಾಲೇಜು ಸ್ಥಾಪನೆಗೆ ಜಮೀನಿನ ಖರೀದಿ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಿಲ್ಲದಿರುವುದು ಕಾಲೇಜು ಸ್ಥಾಪನೆಯ ಕನಸಿಗೆ ತಿಲಾಂಜಲಿ ಇಟ್ಟಂತಿದೆ. ಇದೀಗ ಎರಡನೇ ಬಾರಿಗೆ ಸಿಎಂ ಆಗಿ 2025-26ರ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಈ ಭಾಗದ ಜನರ ಬಹಳಷ್ಟು ನಿರೀಕ್ಷೆಯಿದೆ. ಕಾರಣ, ಕಳೆದ ಬಾರಿಯ ಚುನಾವಣೆಯಲ್ಲಿ ತಮ್ಮ ರಾಜಕೀಯ ಬದುಕಿಗೆ ಪುನರ್ಜನ್ಮ ನೀಡಿದ್ದ ಬಾದಾಮಿ ವಿಧಾನಸಭಾ ಕ್ಷೇತ್ರವು ಬಾಗಲಕೋಟೆ ಜಿಲ್ಲೆಯಲ್ಲಿದ್ದು, ಈ ಹಿಂದೆ ಬಾಗಲಕೋಟೆ ಜಿಲ್ಲೆಗೆ ತಾವೇ ಘೋಷಿಸಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಜನತೆಯ ಋಣ ತೀರಿಸಬೇಕು” ಎಂದು ಹೇಳಿದರು.

Advertisements

“2014-15ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂಬ ಯೋಜನೆಯ ಭಾಗವಾಗಿ ಬಾಗಲಕೋಟೆ ಜತೆಗೆ ಗದಗ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವುದಾಗಿ ಘೋಷಣೆ ಮಾಡಲಾಗಿತ್ತು. ಘೋಷಣೆಯಾದ ಪೈಕಿ ಕೊಪ್ಪಳ, ಹಾವೇರಿ ಜತೆಗೆ ಬಹುತೇಕ ಜಿಲ್ಲೆಗಳಲ್ಲಿ ಆರಂಭಗೊಂಡಿವೆ. ಆದರೆ ಬಾಗಲಕೋಟೆಗೆ ಮಾತ್ರ ಇನ್ನೂ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ ಎನ್ನುವುದು ಶೋಚನೀಯ” ಎಂದು ಬೇಸರ ವ್ಯಕ್ತಪಡಿಸಿದರು.

“ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಎನ್ನುವುದು ಒಂದು ಕನಸಾಗಿರುವ ಈ ಕಾಲಘಟ್ಟದಲ್ಲಿ ಎಲ್ಲರಿಗೂ ಸುಲಭ ಮತ್ತು ಕೈಗೆಟುಕುವ ರೀತಿಯಲ್ಲಿ ಶಿಕ್ಷಣ ಲಭ್ಯವಾಗಲು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ತೀರಾ ಅವಶ್ಯಕತೆ ಇದೆ. ಇದರೊಂದಿಗೆ ಜಿಲ್ಲೆಯ ಬಡ ಜನರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ತಪಾಸಣೆಯೂ ಸಿಗಲಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯು ಬಹಳಷ್ಟು ಪ್ರಾಮುಖ್ಯತೆ ಪಡೆದಿದೆ. ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸುಸಜ್ಜಿತ ಆಸ್ಪತ್ರೆಗಾಗಿ ಈ ಭಾಗದ ವಿದ್ಯಾರ್ಥಿ ಮತ್ತು ಜನತೆ ಬಹಳಷ್ಟು ಆಕಾಂಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಆದರೆ ಘೋಷಣೆಯಾದ ಮೆಡಿಕಲ್ ಕಾಲೇಜು ಕಾರ್ಯಾರಂಭಕ್ಕೆ ಸೂಕ್ತ ಕ್ರಮ ಕೈಗೊಳ್ಳದೆ ಘೋಷಣೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಭಾಗದ ಜನತೆಯ ಅಗತ್ಯತೆಯನ್ನು ಮನಗಂಡು ಜನರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ” ಎಂದು ಕೋರಿದರು.

“ಕರ್ನಾಟಕ ರಾಜ್ಯದ 22 ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಕೋಲಾರ, ಬಾಗಲಕೋಟೆ, ವಿಜಯಪುರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳು ಇನ್ನೂ ಸ್ಥಾಪನೆಯಾಗಿಲ್ಲ. ಖಾಸಗಿ ಮೆಡಿಕಲ್ ಮಾಫಿಯಾ ಹಾಗೂ ರಾಜಕಾರಣಿಗಳ ಹಸ್ತಕ್ಷೇಪದಿಂದ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗದಂತೆ ತಡೆಯುತ್ತಿದೆ ಎನ್ನುವುದು ಬಾಗಲಕೋಟೆಯ ಜನಸಾಮಾನ್ಯರ ಆರೋಪವಾಗಿದ್ದು, ಇದು ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾದ ನಡೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮಾ.10ರಂದು ಮಾನವ ಸರಪಳಿ ಆಂದೋಲನ

“ಅನೇಕ ವರ್ಷಗಳಿಂದ ಶೈಕ್ಷಣಿಕ ವಿಷಯದಲ್ಲಿ ಅನ್ಯಾಯಕ್ಕೆ ಒಳಗಾಗುತ್ತಿರುವ ಬಾಗಲಕೋಟೆ ಜಿಲ್ಲೆಗೆ ಶೈಕ್ಷಣಿಕ ಸಂಸ್ಥೆಗಳ ಅಗತ್ಯತೆಯ ಬಗ್ಗೆ ಈ ಭಾಗದ ಜನಪ್ರತಿನಿಧಿಗಳು ಸರ್ಕಾರ ಮಟ್ಟದಲ್ಲಿ ಧ್ವನಿಯೆತ್ತಬೇಕು, ಜನರ ಬೇಡಿಕೆಯಂತೆ ರಾಜ್ಯದ ಹೊಸ 9 ವಿಶ್ವವಿದ್ಯಾಲಯಗಳನ್ನು ಸ್ಥಗಿತಗೊಳಿಸುವ ಭಾಗವಾಗಿ ಜಮಖಂಡಿಯ ಬಾಗಲಕೋಟೆಯ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾಪವಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆದು ವಿವಿಯನ್ನು ಮುಂದುವರೆಸಿಕೊಂಡು ಹೋಗಲು ಹಾಗೂ ನನೆಗುದಿಗೆ ಬಿದ್ದಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಸ್ಥಾಪನೆಗೆ ಅಗತ್ಯ ಅನುದಾನ ಮತ್ತು ಕಾರ್ಯ ಯೋಜನೆಯನ್ನು ರೂಪಿಸಲು ರಾಜ್ಯ ಸರ್ಕಾರವು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು” ಎಂದು ಎಸ್‌ಐಒ ಇಳಕಲ್ ಘಟಕ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಎಸ್‌ಐಒ ಬಾಗಲಕೋಟೆ ಜಿಲ್ಲಾಧ್ಯಕ್ಷ ಮಹಮ್ಮದ್ ಪೀರ್ ಲಟಗೇರಿ, ಸ್ಥಾನೀಯ ಅಧ್ಯಕ್ಷ ಆಸಿಫ್ ಹುಣಚಗಿ ಹಾಗೂ ಕಾರ್ಯದರ್ಶಿ ಉಸ್ಮಾನ್ ಗನಿ ಶಿವನಗುತ್ತಿ ಮತ್ತು ಇತರ ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X