ಬಾಗಲಕೋಟೆ | ಎರಡು ಕೆರೆಗಳ ಅತಿಕ್ರಮಣದ ಸರ್ವೇ ಕಾರ್ಯ ಆರಂಭ: ಪೌರಾಯುಕ್ತ ಗೋಪಾಲ ಕಾಸೆ

Date:

Advertisements

ಖಾಸಗಿ ಶಿಕ್ಷಣ ಸಂಸ್ಥೆಗಳು ಕೆರೆಗಳನ್ನು ಅತಿಕ್ರಮಿಸಿಕೊಂಡಿವೆ ಎಂಬ ಆಪಾದನೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆರೆಗಳ ಸರ್ವೇಕಾರ್ಯ ಆರಂಭಿಸಲಾಗಿದೆ ಎಂದು ಮುಧೋಳ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಎರಡು ಕೆರೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಆಕ್ರಮಿಸಿಕೊಂಡಿದ್ದು, ಈ ಕುರಿತು ಏನು ಕ್ರಮ ಕೈಗೊಳ್ಳಲಾಗಿದೆಯೆಂದು ನಗರಸಭೆ ಸದಸ್ಯ ಸಂತೋಷ ಪಾಲೋಜಿಯವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಶೀಘ್ರವಾಗಿ ಕೆರೆಗಳ ಸರ್ವೇ ಕಾರ್ಯ ಕೈಗೊಂಡು ಅತಿಕ್ರಮಣ ತೆರವುಗೊಳಿಸಬೇಕೆಂದು ತೀರ್ಮಾನಿಸಲಾಗಿತ್ತು. ಅದರಂತೆ ನಗರದ ಸಿದ್ಧರಾಮೇಶ್ವರ ಕಾಲನಿಯ ಸರ್ವೇ ನಂ. 9ರಲ್ಲಿ ನಗರದ ಸಾಯಿ ನಿಕೇತನ ಶಿಕ್ಷಣ ಸಂಸ್ಥೆ ಹಾಗೂ ದತ್ತ ಮಂದಿರದ ಬಳಿಯಿರುವ ಸರ್ವೇ ನಂ. 558ರ 14 ಎಕರೆ 34 ಗುಂಟೆ ಜಾಗಗಳಲ್ಲಿ ಬಿವಿವಿ ಸಂಘದ ಶಾಲಾ ಕಾಲೇಜುಗಳು ಕೆರೆಗಳನ್ನು ಅತಿಕ್ರಮವಿಸಿಕೊಂಡಿವೆ ಎಂಬುದರ ಬಗ್ಗೆ ಭಾರೀ ವಿವಾದ ಹುಟ್ಟಿಕೊಂಡಿದ್ದು, ಇವುಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿಶೇಷಚೇತನರಿಗೆ ವೀಲ್‌ಚೇರ್, ಇತರೆ ಸಲಕರಣೆಗಳ ವಿತರಣೆ

Advertisements

ಈ ಸಂಬಂಧವಾಗಿ ನಡೆದ ಚರ್ಚೆಯಲ್ಲಿ ಪೌರಾಯುಕ್ತರು ಸರ್ವೇ ಕಾರ್ಯ ಪ್ರಾರಂಭವಾಗಿದೆಯೆಂದು ತಿಳಿಸಿದರೂ, ಕೆಲವು ಸದಸ್ಯರು ಇದರ ಕುರಿತು ವಿವಿಧ ರೀತಿಯಿಂದ ತೀವ್ರವಾಗಿ ಪ್ರಶ್ನಿಸಿದರು. ಪೌರಾಯುಕ್ತರು ನೀಡಿದ ಮಾಹಿತಿಯ ಪ್ರಕಾರ, ನಗರದ ಸಾಯಿ ನಿಕೇತನ ಶಿಕ್ಷಣ ಸಂಸ್ಥೆ ಮತ್ತು ಬಿವಿವಿ ಸಂಘಗಳು ಅತಿಕ್ರಮಣ ಮಾಡಿವೆಯೆಂಬ ಆಪಾದನೆ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರ್ವೇ ಕಾರ್ಯ ನಡೆಯುತ್ತಿದೆ. ಅತಿಕ್ರಮಣಗೊಂಡಿರುವ ಜಾಗವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುವುದೆಂದು ಸದಸ್ಯರಿಗೆ ತಿಳಿಸಿದರು.

ಸರ್ವೇ ನಂ. 558ರಲ್ಲಿ 14 ಎಕರೆ 34 ಗುಂಟೆ ಜಮೀನಿನ ಪರಿಷ್ಕೃತ ವಿನ್ಯಾಸ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಕೆಲವು ಸದಸ್ಯರು ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಳ್ಳುವವರೆಗೆ ಯಾವುದೇ ಅನುಮೋದನೆ ನೀಡದಂತೆ ಹಾಗೂ ಕೆರೆಗಳನ್ನು ಉಳಿಸುವ ಸಲುವಾಗಿ, ಕೆರೆಗಳ ಬಳಿಯ ಜಮೀನನ್ನು ಬಫರ್ ಜೋನ್ ಮಾಡಿ ತಂತಿಬೇಲಿ ಹಾಕುವಂತೆ ಕೆಲವು ಸದಸ್ಯರು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X