ಬಾಗಲಕೋಟೆ | ‘ಬಸವಣ್ಣ ಸಾಂಸ್ಕೃತಿಕ ನಾಯಕ’ ಘೋಷಣೆ; ಸಿಹಿ ಹಂಚಿ ಸಂಭ್ರಮ

Date:

Advertisements

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಂತರ ಮಾತನಾಡಿದ ಪ್ರಗತಿಪರ ಹೋರಾಟಗಾರ ಯಲ್ಲಪ್ಪ ಹೆಗಡ, ಸರ್ಕಾರವು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕನನ್ನಾಗಿ ಮಾಡಿದ್ದಕ್ಕಾಗಿ ಶರಣರ ಬಂಧುಗಳ ಪರವಾಗಿ ಹೃತ್ಪೂರ್ವಕವಾಗಿ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇವೆ ಎಂದರು.

12ನೇ ಶತಮಾನದಲ್ಲಿ ಅಸಮಾನತೆ ವಿರುದ್ಧ ಜಾತಿಯತೆಯ ವಿರುದ್ಧ, ಶೋಷಣೆಯ ವಿರುದ್ಧ ಧ್ವನಿ ಎತ್ತಿ ಕ್ರಾಂತಿ ಮಾಡಿದವರು ಬಸವಣ್ಣ. ಎಲ್ಲಾ ಕಾಯಕ ಜೀವಿಗಳನ್ನು ಒಗ್ಗೂಡಿಸಿ ಶೋಷಣೆ ಮುಕ್ತ ಸಮಾಜ ನಿರ್ಮಿಸಲು ಹೋರಾಡಿದವರು. ಎಲ್ಲಾ ಸಮುದಾಯದ ಶರಣರನ್ನು ಒಗ್ಗೂಡಿಸಿ ಅನುಭವ ಮಂಟಪವನ್ನು ನಿರ್ಮಿಸಿದರು. ಇಂಥ ಪರಂಪರೆ ಇರುವ ನಮ್ಮ ನಾಡಲ್ಲಿ ಹಲವು ವಿಚಾರಗಳಿಂದ ಜನ ವಿಮುಖವಾಗುತ್ತಿರುವುದು ವಿಷಾದನೀಯ ಎಂದರು.

Advertisements

ಇದಕ್ಕೆ ವ್ಯವಸ್ಥಿತವಾಗಿ ಪಿತೋರಿ ಕೂಡ ನಡೆಯುತ್ತಿವೆ. ಇದರ ವಿರುದ್ಧ ಸಮಾನಮನಸ್ಕರು ಎಚ್ಚೆತ್ತುಕೊಂಡು ಸೌಹಾರ್ದತೆಯಿಂದ ಒಂದೇ ಮಕ್ಕಳ ತಾಯಿಯಾಗಿ ಈ ಹೋರಾಟವನ್ನು ಕೈಗೊಳ್ಳಬೇಕೆಂದರು. ಸಂಸ್ಕೃತಿಕ ನಾಯಕ ಅಂತ ಸರ್ಕಾರ ಘೋಷಣೆ ಮಾಡಿದರಷ್ಟೇ ಸಾಲದು ಅವರ ವಿಚಾರಗಳು ವಚನಗಳನ್ನು ಪ್ರತಿ ಮನೆ ಮನೆಗೆ ತಲುಪುವಂತ ಕೆಲಸ ಸರ್ಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗಣೇಶ್ ಮೇತ್ರಿ, ಭೀಮಾರ್ಮಿ ತಾಲೂಕ ಅಧ್ಯಕ್ಷ ಶೇಖರ್ ಕಾಂಬಳೆ, ಮೋಹಿನ್ ಅಂಜುಮನ್ ಸಂಸ್ಥೆಯ ಮುಖ್ಯಸ್ಥ ಆರಿಫ್, ಶ್ರೀಕಾಂತ್ ಪೂಜಾರಿ, ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮುಖ್ಯಸ್ಥ ಭೀಮಪ್ಪ ಹಳ್ಳಿ, ಅಂಥೋದೇಯಾ ಸಂಸ್ಥೆಯ ಮುಖ್ಯಸ್ಥ ಅಂತೋನಿ ಸಿ, ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ, ಸಂಜು ಕುರೆನ್ನವರ್, ಈರಪ್ಪ ಉಗ್ಗಿನವರ್ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X