ಬಾಗಲಕೋಟೆ | ನಿಲ್ದಾಣದಲ್ಲಿ ನಿಲ್ಲಿಸದ ಬಸ್‌ಗೆ ಕಲ್ಲೆಸೆದು ದಂಡ ತೆತ್ತ ಮಹಿಳೆ

Date:

Advertisements

ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್‌ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ.

ಈ ನಡುವೆ, ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವಂತೆ ಕೈ ಬೀಸಿದರೂ, ನಿಲ್ಲಿಸದೆ ಮುಂದೆ ಹೋದ ಬಸ್‌ಗೆ ಮಹಿಳೆಯೊಬ್ಬರು ಕಲ್ಲೆಸೆದು, ದಂಡ ತೆತ್ತು, ಅದೇ ಬಸ್‌ನಲ್ಲಿ ಪ್ರಯಾಣಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ಮರಳುತ್ತಿದ್ದರು. ಬಾದಾಮಿ ತಾಲೂಕಿನ ಲಿಂಗಾಪುರ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತಿದ್ದರು. ಯಾವುದೇ ಬಸ್‌ ಬಾರದ ಕಾರಣ ಭ್ರಮನಿರಸನಗೊಂಡಿದ್ದರು. ಈ ವೇಳೆ, ಬಂದ ಕೊಪ್ಪಳ-ಹೊಸಪೇಟೆ ನಾನ್‌ಸ್ಟಾಪ್ ಬಸ್‌ಗೆ ನಿಲ್ಲಿಸುವಂತೆ ಕೈ ಬೀಸಿದ್ದಾರೆ. ಬಸ್‌ ನಿಲ್ಲಿಸದಿದ್ದಾಗ ಕಲ್ಲು ಎಸೆದಿದ್ದಾರೆ.

Advertisements

ಕಲ್ಲು ಬಿದ್ದ ಬಸ್‌ನ ಕಿಟಕಿಗೆ ಹಾನಿಯಾಗಿದೆ. ಬಳಿಕ ಬಸ್‌ ಚಾಲಕ ಬಸ್‌ ನಿಲ್ಲಿಸಿ, ಆಕೆಯನ್ನು ಹತ್ತಿಕೊಂಡು ಮುನಿರಾಬಾದ್‌ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ. ಬಟ್‌ ಕಿಟಕಿ ರಿಪೇರಿಗಾಗಿ 2,000 ರೂ. ದಂಡ ಪಾವತಿಸಿದ ಮಹಿಳೆ, ಅದೇ ಬಸ್‌ನಲ್ಲಿ ತನ್ನೂರಿಗೆ ತೆರಳಿದ್ದಾರೆ.

“ಲಿಂಗಾಪುರ ನಿಲ್ದಾಣದಲ್ಲಿ ಯಾವು ಬಸ್‌ ಕೂಡ ನಿಲ್ಲಿಸುತ್ತಿರಲಿಲ್ಲ. ಬಸ್‌ ನಿಲ್ಲಿಸದಿದ್ದರೆ ನಾವು ಪ್ರಯಾಣಿಸುವುದು ಹೇಗೆ. ಕಾದು ಕಾದು ಬಸವಳಿದು, ಕಲ್ಲು ಎಸೆದೆ ಎಂದು ಆಕೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಾರೆ” ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X