ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

Date:

ಜನವರಿ 1ರ ಭೀಮಾ ಕೋರೆಗಾಂವ್ ವಿಜಯೋತ್ಸವ ನಮ್ಮೆಲ್ಲರ ಬಿಡುಗಡೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದೊಂದಿಗೆ ಅವಿನಾಭಾವವಾಗಿ ಬೆಸೆದ ದಿನ ಎಂದು ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ರಾಜ್ಯ ಉಸ್ತುವಾರಿ ಕೆ ಸಿ ಅಕ್ಷತಾ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಮಹಾರಾಷ್ಟ್ರ ರಾಜ್ಯದ ಪುಣೆ ಸಮೀಪದ ಭೀಮಾ ನದಿ ತೀರದಲ್ಲಿ 1818ರಲ್ಲಿ ನಡೆದ ಯುದ್ಧದಲ್ಲಿ ಸುಮಾರು 28,000ದಷ್ಟಿದ್ದ ಬ್ರಾಹ್ಮಣ ಮರಾಠ ಪೇಶ್ವೆ ಸೈನ್ಯವನ್ನು ಕೇವಲ 500 ಜನ ಮಹರ್ ಸೖನಿಕರು ಸದೆಬಡೆದು ಸೋಲಿಸಿ ಅಸ್ಪೃಶ್ಯತೆ, ಅಸಮಾನತೆಯ ಮುಯ್ಯಿ ತೀರಿಸಿಕೊಂಡ ಇತಿಹಾಸವೇ ಭೀಮಾ ಕೋರೆಗಾಂವ್ ವಿಜಯೋತ್ಸವ” ಎಂದರು.

“ಈ ಐತಿಹಾಸಿಕ ವಿಜಯದ ನೆನಪಿಗಾಗಿಯೇ ಯುದ್ಧದಲ್ಲಿ ಮಡಿದ ಮಹರ್ ಸೈನಿಕರ ನೆನಪಿಗಾಗಿ ಭೀಮಾ ಕೋರೆಗಾಂವ್ ಸ್ಮಾರಕ ಕಂಬವನ್ನು ಬ್ರಿಟಿಷರು ಸ್ಥಾಪಿಸಿದರು. ದಲಿತರ ಸ್ವಾಭಿಮಾನದ ಪ್ರತೀಕವಾದ, ದಲಿತರ ಅಸ್ಮಿತೆಯ ಸಂಕೇತವಾದ ಈ ವಿಜಯೋತ್ಸವವನ್ನು ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು” ಎಂದು ತಿಳಿಸಿದರು.

“ಯಾವುದೇ ಪ್ರಮುಖ ಕಾರ್ಯಕ್ರಮಗಳಿದ್ದರೂ ಕೂಡ ಬಾಬಾ ಸಾಹೇಬ್ ಅವರು ತಮ್ಮ ಜೀವನದ ಕೊನೆಯ ದಿನದವರೆಗೆ ಜನವರಿ 1ರಂದು ಭೀಮಾ ಕೋರೆಗಾಂವ್‌ಗೆ ತೆರಳಿ ವಿಜಯ ಸ್ತಂಭಕ್ಕೆ ಗೌರವ ಸಲ್ಲಿಸುತ್ತಿದ್ದರು. ಅಂಬೇಡ್ಕರ್ ವಿಚಾರಧಾರೆಯಲ್ಲಿ ನಂಬಿಕೆಯಿಟ್ಟಿರುವ ನಾವು ಆ ಪರಂಪರೆಯನ್ನು ಮುಂದುವರಿಸಿಕೊಂಡು ಅವರ ಚಿಂತನೆ ಹಾಗೂ ಹೋರಾಟವನ್ನು ಬೆಂಬಲಿಸಿ ಮುನ್ನಡೆಸುತ್ತಿದ್ದೇವೆ” ಎಂದು ಹೇಳಿದರು.

“ಭೀಮಾ ಕೋರೇಗಾಂವ್ ವಿಜಯವು ಶೋಷಿತ ಸಮುದಾಯಗಳು ಜಾತಿವಾದಿ ಪೇಶ್ವೆಗಳ ವಿರುದ್ಧ ಜಯ ಸಾಧಿಸಿದ ಐತಿಹಾಸಿಕ ದಿನವಾಗಿದ್ದು, ಅದು ನಮ್ಮ ಸ್ವಾಭಿಮಾನದ ಪ್ರತೀಕವಾಗಿದೆ. ಜನವರಿ 1 ಬಂದಾಗಲೆಲ್ಲ ನಮ್ಮ ರೋಮರೋಮಗಳಲ್ಲಿ ಶೌರ್ಯದ ಕಿಚ್ಚು ಉರಿಯುತ್ತದೆ. ನಮ್ಮ ಹಿರಿಯರು ನಿರ್ಮಿಸಿದ ಶೌರ್ಯದ ಇತಿಹಾಸವನ್ನು ನೆನಪಿಸಿಕೊಂಡು ನಾವು ರೋಮಾಂಚನಗೊಳ್ಳುತ್ತೇವೆ. ಈ ಹಿನ್ನಲೆಯಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಕಾರ್ಯಕರ್ತರು ಬೆಳಿಗ್ಗೆಯಿಂದಲೇ ತುದಿಗಾಲಲ್ಲಿ ನಿಂತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ” ಎಂದು ಅವರು ತಿಳಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಭೀಮ್ ಆರ್ಮಿ ಏಕತಾ ಮಿಷನ್ ರಾಜ್ಯ ಅಧ್ಯಕ್ಷ ಮತಿನ ಕುಮಾರ್ ಅಂಬೇಡ್ಕರ್ ಮಾತನಾಡಿ, “ನವ ಪೇಶ್ವೆವಾದಿಗಳು ಇನ್ನೂ ಕೂಡ ದಲಿತರ ಮೇಲಿನ ದಮನವನ್ನು ಕಡಿಮೆ ಮಾಡಿಲ್ಲ. ಹಾಗಾಗಿ ಈ ಮಹರ್ ಪ್ರತಿಭಟನೆ ಇಂದಿಗೂ ಮುಂದುವರೆಯಬೇಕಾದ ಅಗತ್ಯವಿದೆ. ನವ ಪೇಶ್ವೆವಾದಿ ಆಡಳಿತವನ್ನು ಕೊನೆಗಾಣಿಸುವವರೆಗೂ ಭೀಮಾ ಕೋರೆಗಾಂವ್ ಹೋರಾಟ ಮುಂದುವರೆಯಬೇಕಾಗಿದೆ” ಎಂದು ತಿಳಿಸಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದಂತೆ ಇದೊಂದು ವಿಜಯೋತ್ಸವ ಮಾತ್ರವಲ್ಲ, ದಲಿತರ ಪ್ರತಿರೋಧದ ಪ್ರತೀಕವಾಗಿ ಬ್ರಾಹ್ಮಣಶಾಹಿ ನವ ಪೇಶ್ವೆವಾದಿಗಳ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡಬೇಕಾಗಿದೆ. ಆ ಮೂಲಕ ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಎಸ್ ಐಆರ್ ಓಟಿನ ಹಕ್ಕು ಕಸಿಯುತ್ತಿದೆ : ಡಾ ಎಚ್ ವಿ ವಾಸು

“ಇತಿಹಾಸದಲ್ಲಿ ಮುಚ್ಚಿಟ್ಟಿರುವುದನ್ನು ಅಂಬೇಡ್ಕರ್‌ ಬ್ರಿಟನ್‌ನಲ್ಲಿ ಅಧ್ಯಯನ ಮಾಡುವಾಗ ಗ್ರಂಥಾಲಯದಲ್ಲಿ ಈ ಯುದ್ಧ ಕುರಿತು ಮಾಹಿತಿ ಸಿಕ್ಕಿದೆ. ಈ ಯುದ್ಧದ ಕುರಿತು ಹೊರ ಜಗತ್ತಿಗೆ ಪರಿಚಯಿಸಿದ ಕೀರ್ತಿ ಅಂಬೇಡ್ಕರ್‌ಗೆ ಸಲ್ಲುತ್ತದೆ” ಎಂದರು.

ಈ ಸಂಭ್ರಮಾಚರಣೆಯಲ್ಲಿ ರಾಜ್ಯ ಉಪಧ್ಯಕ್ಷ ಹುಸನಪ್ಪ ಚಲವಾದಿ, ಪ್ರವೀಣಗೌಡ ಪಾಟೀಲ್, ಅನಿಲ್ ಗಚಿನಮನಿ, ಶ್ರೀಕಾಂತ್ ಗೋಡೆಪ್ಪನವರ, ಬಸವರಾಜ್ ರಾಜವರ್ಧನ್ ಹಾಗೂ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಶ್ರಮಿಕ ಭೋವಿಗರಿಗೆ ಕಿರುಕುಳ ನೀಡದಿರಿ: ಅಧಿಕಾರಿಗಳಿಗೆ ರಾಮಪ್ಪ ಎಂ ಸೂಚನೆ

ಕುಲಕಸುಬಾಗಿ ತಲೆತಲಾಂತರಗಳಿಂದ ಕೈಯಿಂದ ಕಲ್ಲು ಒಡೆಯುವ ಮೂಲಕ ಜೀವನ ನಡೆಸುತ್ತಿರುವ ಶ್ರಮಿಕ...

ಮುಧೋಳ | ಕಬ್ಬಿನ ನ್ಯಾಯಯುತ ದರ ನಿಗದಿಗೆ ಕೋಡಿಹಳ್ಳಿ ಚಂದ್ರಶೇಖರ ಆಗ್ರಹ

ಕಬ್ಬಿನ ದರ ನಿಗದಿ ವಿಚಾರ ಇದೀಗ ಮತ್ತೆ ರೈತರು ಹಾಗೂ ಸರ್ಕಾರದ...

ಬಾಗಲಕೋಟೆ | ಸೆ. 10ರಂದು ವಿದ್ಯುತ್, ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬಾಗಲಕೋಟೆ ನೋಡಲ್ ವ್ಯಾಪ್ತಿಯ ವಿವಿಧ ವಿದ್ಯುತ್ ಕೇಂದ್ರಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ...

ಚಿತ್ತರಗಿ ಮಠದ ಜಾತ್ರಾ ಮಹೋತ್ಸವ: ಸೌಹಾರ್ದ ಸಮಾಜಕ್ಕೆ ಮಾದರಿಯಾದ ಇಳಕಲ್

ಶರಣ ಸಂಸ್ಕೃತಿಯ ಐತಿಹಾಸಿಕ ಪುಣ್ಯಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ಚಿತ್ತರಗಿ ವಿಜಯ...