ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

Date:

Advertisements

ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಆಹಾರ ಇಲಾಖೆಯಲ್ಲಿ ಸಾರ್ವನಿಕರು ಶಿರಸ್ತೇದಾರ್ ಸಂತೋಷ್ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೆಪ್ಟೆಂಬರ್ 23ರಿಂದ ಎಲ್ಲ ಸಮಸ್ಯೆಗಳು ಸರಿಹೋಗಲಿದೆ. ಸರ್ವರ್‌ ಸಮಸ್ಯೆ ಇರುವುದಿಲ್ಲ. ಗ್ರಾಹಕರು ಪಡಿತರ ಕಾರ್ಡುಗಳಲ್ಲಿನ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದರು. ಆದರೆ, ಸಮಸ್ಯೆ ಇನ್ನೂ ಮುಂದುವರೆದಿದೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಪಡಿತರ ಕಾರ್ಡುಗಳಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಸೇರಿದಂತೆ ನಾನಾ ರೀತಿಯ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡಿದೆ. ಆದರೆ, ಸರ್ವರ್‌ ಸಮಸ್ಯೆ ಬಗೆಹರಿಯದ ಕಾರಣ ಹಲವಾರು ದಿನಗಳಿಂದ ಗ್ರಾಹಕರು ಮಾತ್ರ ಸೈಬರ್‌ ಕೇಂದ್ರಗಳಿಗೆ ಅಲೆದು ಅಲೆದು ಸಾರ್ವಜನಿಕರು ಅಸಮಾಧಾನಗೊಂಡಿದ್ದಾರೆ.

Advertisements

ಕಳೆದ ಎರಡು ವಾರಗಳಿಂದ ಬೀಳಗಿ ತಾಲೂಕಿನಲ್ಲಿ ಒಂದೇ ಒಂದು ಕಾರ್ಡಿನಲ್ಲಿ ತಿದ್ದುಪಡಿ ಮಾಡಿಸಲು ಸಾಧ್ಯವಾಗಿಲ್ಲ. ದಿನನಿತ್ಯ ಹಲವಾರು ಜನರು ಕಾರ್ಡ್‌ಗಳನ್ನು ಹಿಡಿದುಕೊಂಡು ಸೈಬರ್‌ ಕೇಂದ್ರ, ಗ್ರಾಮ ಒನ್‌ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಆದರೆ, ಕೆಲಸವಾಗದೆ ಇಲಾಖೆ ವಿರುದ್ದ ಅಸಮಾಧಾನಗೊಂಡು ವಾಪಸ್‌ ಹೋಗುತ್ತಿದ್ದಾರೆ.

ಸರ್ಕಾರ ಅರ್ಹರು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದೆಂದು ಕಾರ್ಡುಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳುತ್ತಿದೆ. ಮತ್ತೊಂದು ಕಡೆ ಸರಿಯಾದ ರೀತಿಯಲ್ಲಿ ಸರ್ವರ್‌ ಕೆಲಸ ಮಾಡದೇ ಇರುವುದರಿಂದ ಅನೇಕ ಅರ್ಹ ಫಲಾನುಭವಿಗಳು ಯೋಜನೆಯಿಂದ ದೂರ ಉಳಿಯುವಂತಾಗಿದೆ.

ವರದಿ: ಖಾಜಾಮೈನುದ್ದಿನ ತಹಶಿಲ್ದಾರ, ಸಿಟಿಜನ್ ಜರ್ನಲಿಸ್ಟ್, ಬೀಳಗಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X