ಬಾಗಲಕೋಟೆ | ಹುತ್ತಗಳಿಗೆ ಹಾಲೆರೆಯದೆ, ಹಸಿದವರಿಗೆ ಹಾಲು ಕೊಡಿ: ದಸಾಪ ಅಧ್ಯಕ್ಷ

Date:

Advertisements

ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್‌ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಜೈನ ಅನಾಥ ಆಶ್ರಮದಲ್ಲಿ ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕ ಹಾಗೂ ಭಾರತೀಯ ವಿದ್ಯಾರ್ಥಿ ಸಂಘ ಒಗ್ಗೂಡಿ ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸಿದರು. ಈ ವೇಳೆ ಅವರು ಮಾತನಾಡಿದರು.

“ಪ್ರಬಲ ಸಮುದಾಯವು ಸಮಾಜದಲ್ಲಿ ಮೂಡನಂಬಿಕೆಗಳನ್ನು ಬಿತ್ತಿ, ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಕಲ್ಲನಾಗರಕ್ಕೆ ಹಾಲು ಎರೆದರೆ ಯಾವುದೇ ಪ್ರಯೋಜನವಿಲ್ಲ., ಇಂತಹ ಮೂಡನಂಬಿಕೆಗಳನ್ನು ಬಿಟ್ಟು, ಅದೇ ಹಾಲನ್ನು ಹಸಿದವರಿಗೆ ನೀಡಬೇಕು” ಎಂದು ಈರಪ್ಪ ಸುತಾರ ಹೇಳಿದರು.

Advertisements

ಬಿವಿಎಸ್ ಮುಖಂಡ ಪ್ರವೀಣ ಮೌರ್ಯ ಮಾತನಾಡಿ, “ದೇಶದಲ್ಲಿ ಇನ್ನು ಕೂಡ ಅಪೌಷ್ಟಿಕತೆ ಕಾಡುತ್ತಿದೆ. ಹಾಲನ್ನು ವ್ಯರ್ಥ ಮಾಡದೇ ಅಗತ್ಯ ಇರುವವರಿಗೆ ಕುಡಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಮುಖಂಡರಾದ ಮಹಾದೇವ ಮೌರ್ಯ, ಕಲ್ಮೇಶ ಮಾದರ ಮತ್ತು ಗಣೇಶ್ ಮಾಂಗ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ...

ʼವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿʼ

ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿ...

ಬಾಗಲಕೋಟೆ | ಎಸ್ಐಟಿ ತನಿಖೆಗೆ ಸಂಪೂರ್ಣ ಅಧಿಕಾರ ನೀಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

"ಧರ್ಮಸ್ಥಳದ ವ್ಯಾಪ್ತಿ ಪ್ರದೇಶದಲ್ಲಿ ಸೌಜನ್ಯ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ದುರ್ಘಟನೆಯ...

Download Eedina App Android / iOS

X