ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

Date:

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ ಹೋಗದೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದು. ಹಾವು ಕಡಿತಕ್ಕೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಶ ಕೋಣಿ ತಿಳಿಸಿದರು.

- Advertisement -

ಬಾಗಲಕೋಟೆ ನಗರದ ಜಿಲ್ಲಾ ಆಸ್ಪತ್ರೆಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹಾವು ಕಡಿತ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

“ಹಾವು ಕಚ್ಚಿದ ಸಂದರ್ಭದಲ್ಲಿ ಕೆಲವರು ವೈಜ್ಞಾನಿಕ ವೈದ್ಯಕೀಯ ಚಿಕಿತ್ಸೆಗೆ ಬದಲಾಗಿ ನಾಟಿ ಚಿಕಿತ್ಸೆ ಅಥವಾ ಇತರ ಪರ್ಯಾಯ ವಿಧಾನಗಳ ಮೊರೆ ಹೋಗುತ್ತಾರೆ. ಇದರಿಂದ ಚಿಕಿತ್ಸೆಗೆ ಅಗತ್ಯವಿರುವ ಸಮಯ ವ್ಯರ್ಥವಾಗಿ, ವಿಷದ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಹಾವು ಕಡಿತವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಬೇಕು” ಎಂದು ಡಾ. ಕೋಣಿ ಸಲಹೆ ನೀಡಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಅಶೋಕ ಸೂರ್ಯವಂಶಿ ಮಾತನಾಡಿ, “ಹಾವು ಕಡಿತದಿಂದ ಸಂಭವಿಸುವ ಸಾವುಗಳನ್ನು ಕಡಿಮೆ ಮಾಡಲು ಕೇವಲ ಆರೋಗ್ಯ ಇಲಾಖೆಯ ಪ್ರಯತ್ನ ಸಾಕಾಗುವುದಿಲ್ಲ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ” ಎಂದರು.

Advertisements

“ಹಾವು ಕಚ್ಚಿದ ಸಂದರ್ಭದಲ್ಲಿ ಏನು ಮಾಡಬೇಕು, ಯಾವ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ತಲುಪಬೇಕು. ವೈಜ್ಞಾನಿಕ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವುದರಿಂದ ಅನೇಕ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದರು.

ಹಾವುಗಳ ಬಗ್ಗೆ ತಿಳಿದುಕೊಳ್ಳುವುದೂ ಮುಖ್ಯ

ಎಪಿಡೆಮಿಯಾಲಜಿಸ್ಟ್ ಡಾ. ಸೀಮಾ ಹುದ್ದಾರ ಅವರು ವಿವಿಧ ಜಾತಿಯ ಹಾವುಗಳ ಸ್ವರೂಪ, ಅವುಗಳನ್ನು ಗುರುತಿಸುವ ವಿಧಾನ ಹಾಗೂ ಹಾವು ಕಡಿತದ ನಂತರ ಸಾಮಾನ್ಯವಾಗಿ ಕಂಡುಬರುವ ಲಕ್ಷಣಗಳ ಕುರಿತು ಮಾಹಿತಿ ನೀಡಿದರು.

“ಹಾವು ಕಡಿತದ ಪ್ರಕರಣಗಳಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುವುದು ಅತ್ಯಂತ ಪ್ರಮುಖವಾಗಿರುವುದರಿಂದ, ಸಾರ್ವಜನಿಕರು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು” ಎಂದು ತಿಳಿಸಿದರು.

ಉರಗ ರಕ್ಷಕ ರಾಜಮಹ್ಮದ ಮದಾರಿಯಾ ಮಾತನಾಡಿ, “ಜನವಸತಿ ಪ್ರದೇಶಗಳಲ್ಲಿ ಹಾವುಗಳು ಕಾಣಿಸಿಕೊಂಡಾಗ ಭಯದಿಂದ ಅವುಗಳನ್ನು ಕೊಲ್ಲುವ ಬದಲು ತರಬೇತಿ ಪಡೆದ ಉರಗ ರಕ್ಷಕರಿಗೆ ಮಾಹಿತಿ ನೀಡಬೇಕು. ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸಿ ನೈಸರ್ಗಿಕ ಪರಿಸರಕ್ಕೆ ಬಿಡುವ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕೆ.ರಾಜೇಂದ್ರ

ಕಾರ್ಯಕ್ರಮದಲ್ಲಿ ಜಿಲ್ಲಾ ಸಮೀಕ್ಷಾ ಘಟಕದ ಐಡಿಎಸ್‌ಪಿ ಡೇಟಾ ಮ್ಯಾನೇಜರ್ ಪ್ರವೀಣ ಕಾಶಿನಕುಂಟಿ, ಪ್ಯಾರಾಮೆಡಿಕಲ್ ಕಾಲೇಜಿನ ಸಂಯೋಜಕ ಸಂತೋಷಕುಮಾರ ಮಠ, ಎಫ್‌ಎಲ್‌ಸಿ ಎಂ ಬಿ ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...