ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

Date:

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಕಾರಗೊಂಡಿದ್ದು, ಇದೇ ಅಕ್ಟೋಬರ್ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಶಾಸಕ ಉಮೇಶ ಎಚ್. ಮೇಟಿ ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ನವನಗರ ಯೂನಿಟ್-1ರ ಸೆಕ್ಟರ್ ನಂ.1 ಮತ್ತು 13ರಲ್ಲಿ ಸುಮಾರು 44 ಎಕರೆ ಜಮೀನನ್ನು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಹಸ್ತಾಂತರಿಸಲಾಗಿದೆ. ಕಾಲೇಜಿನ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸ್ವಂತ ಕಟ್ಟಡ ಪೂರ್ಣಗೊಳ್ಳುವವರೆಗೆ ನವನಗರ ಯೂನಿಟ್-2ರ ಸೆಕ್ಟರ್ ನಂ.88ರಲ್ಲಿರುವ ಬಿಟಿಡಿಎ ಕಟ್ಟಡದಲ್ಲಿ ಕಾಲೇಜು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮೊದಲ ಹಂತದಲ್ಲಿ 100 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ತಲಾ 35 ವಿದ್ಯಾರ್ಥಿಗಳಂತೆ ಮೂರು ಬ್ಯಾಚ್‌ಗಳಲ್ಲಿ ತರಗತಿಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ತರಗತಿ ಕೊಠಡಿ, ಸಂಶೋಧನಾ ಕೊಠಡಿಗಳು ಹಾಗೂ ವಿವಿಧ ಪ್ರಯೋಗಾಲಯಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಮುಖ್ಯ ಕಟ್ಟಡದ ಆಧುನೀಕರಣ ಕಾಮಗಾರಿಯನ್ನು ಪರಿಶೀಲಿಸಲಾಗಿದ್ದು, ಅಕ್ಟೋಬರ್ 15ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಸರ್ಕಾರಿ ವೈದ್ಯಕೀಯ ಕಾಲೇಜಿನ ಆರಂಭಕ್ಕಾಗಿ ದಕ್ಷ ಅಧಿಕಾರಿ ಡಾ. ಬಿ.ಎಚ್ ನಾರಾಯಣಿ ವಿಶೇಷಾಧಿಕಾರಿಯಾಗಿ ನೇಮಕವಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ.

“ಗ್ರಾಮೀಣ ಹಾಗೂ ಪ್ರತಿಭಾವಂತ ಮಕ್ಕಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ತಮ್ಮ ತಂದೆ ದಿ. ಎಚ್.ವೈ ಮೇಟಿ ಅವರ ದೂರದೃಷ್ಟಿಯ ಯೋಜನೆ ಇದೀಗ ಸಾಕಾರಗೊಳ್ಳುತ್ತಿದ್ದು, ಅಕ್ಟೋಬರ್‌ನಿಂದ ಕಾಲೇಜು ಅಧಿಕೃತವಾಗಿ ಆರಂಭವಾಗುತ್ತಿರುವುದು ಸಂತಸ ತಂದಿದೆ” ಎಂದು ಶಾಸಕ ಉಮೇಶ ಮೇಟಿ ಹೇಳಿದ್ದಾರೆ.

ನವನಗರ ಯೂನಿಟ್-2ರ ಸೆಕ್ಟರ್ ನಂ.88ರಲ್ಲಿ ವೈದ್ಯಕೀಯ ಕಾಲೇಜಿನ ಮೊದಲ ಬ್ಯಾಚ್‌ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳೊಂದಿಗೆ ಶಾಸಕ ಉಮೇಶ ಮೇಟಿ ಚರ್ಚೆ ನಡೆಸಿದರು. ಹೊಸದಾಗಿ ಆರಂಭಗೊಳ್ಳುತ್ತಿರುವ ಕಾಲೇಜಿನಲ್ಲಿ ಮೊದಲ ಬ್ಯಾಚ್ ವಿದ್ಯಾರ್ಥಿಗಳಾಗಿ ಪ್ರವೇಶ ದೊರೆತಿರುವುದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಬಳಿಕ ಡಾ. ನಾರಾಯಣಿ ಹಾಗೂ ಪಕ್ಷದ ಪ್ರಮುಖರೊಂದಿಗೆ ಕಟ್ಟಡದ ಆಧುನೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಮೇಟಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ರಜಾಕ ಬೇನೂರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಬರ್ ಮುಲ್ಲಾ, ಎಸ್.ಎನ್ ರಾಂಪುರ, ಪ್ರಮುಖರಾದ ಹೊಳಬಸು ಶೆಟ್ಟರ, ಮಲ್ಲಿಕಾರ್ಜುನ ಮೇಟಿ, ನಿಂಗಣ್ಣ ಕೋಟಿ, ನಾರಾಯಣ ದೇಸಾಯಿ, ಗಣಪತಸಾ ದಾನಿ, ಶಿವಕುಮಾರ ನಂದಿಕೋಲಮಠ, ದ್ಯಾಮಣ್ಣ ಗಾಳಿ, ಹಾಜಿಸಾಬ ದಂಡಿನ, ಶಂಕರ ಮಂಕಣಿ, ದೇವಿಪ್ರಸಾದ ನಿಂಬಲಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...