ಬಾಗಲಕೋಟೆಗೆ ಉದ್ಯೋಗ ನಿಧಿ ಬಲ: ಕೈಗಾರಿಕೆಗಳಿಗೆ ಉತ್ತೇಜನ, ಯುವಜನರಿಗೆ ಉದ್ಯೋಗದ ನಿರೀಕ್ಷೆ

Date:

ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದ ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಇದೀಗ ಬಾಗಲಕೋಟೆ ಜಿಲ್ಲೆ ಸೇರ್ಪಡೆಯಾಗಿದೆ.

- Advertisement -

ಆರಂಭಿಕ ಹಂತದಲ್ಲಿ ಯೋಜನೆಯ ಪಟ್ಟಿಯಿಂದ ಬಾಗಲಕೋಟೆ ಜಿಲ್ಲೆಯನ್ನು ಹೊರಗಿಡಲಾಗಿತ್ತು. ಜಿಲ್ಲೆಯ ಕೈಗಾರಿಕಾ ಸಾಮರ್ಥ್ಯ, ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಹಾಗೂ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಸೃಷ್ಟಿಸುವ ಅಗತ್ಯವನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯನ್ನು ಯೋಜನೆಗೆ ಸೇರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಹೊಸ ಉದ್ಯೋಗಕ್ಕೆ ಸರ್ಕಾರದ ಪ್ರೋತ್ಸಾಹ

ಪ್ರೊ. ಎಂ. ಗೋವಿಂದ ರಾವ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ರೂಪಿಸಲಾಗಿರುವ ಈ ಯೋಜನೆಯಡಿ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ಯಮಿಗಳಿಗೆ ಸರ್ಕಾರದಿಂದ ಆರ್ಥಿಕ ಪ್ರೋತ್ಸಾಹ ದೊರೆಯಲಿದೆ.

Advertisements

ಯೋಜನೆಯಡಿ ಪ್ರತಿ ಹೊಸ ಉದ್ಯೋಗಿಗೆ ತಿಂಗಳಿಗೆ ₹2,500ರಂತೆ ಗರಿಷ್ಠ 24 ತಿಂಗಳ ಅವಧಿಗೆ ಪ್ರೋತ್ಸಾಹಧನ ನೀಡುವ ವ್ಯವಸ್ಥೆ ಇದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟು 1 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಯೋಜನೆಯ ಪ್ರಯೋಜನ ಪಡೆಯುವ ಉದ್ಯೋಗಿ ಅಧಿಸೂಚಿತ ಜಿಲ್ಲೆಯ ನಿವಾಸಿಯಾಗಿರಬೇಕು ಹಾಗೂ 18ರಿಂದ 45 ವರ್ಷದೊಳಗಿನವರಾಗಿರಬೇಕೆಂಬ ಷರತ್ತು ವಿಧಿಸಲಾಗಿದೆ.

MSME ಘಟಕಗಳಿಗೆ ಅವಕಾಶ

ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತವಾಗಿರುವ ಉತ್ಪಾದನಾ ಮತ್ತು ಸೇವಾ ವಲಯದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳು ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಅರ್ಹವಾಗಿವೆ.

ಯೋಜನೆಯ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗುತ್ತದೆ. ಪ್ರೋತ್ಸಾಹಧನ ಬಿಡುಗಡೆ ಮಾಡುವ ಮೊದಲು ಸಂಬಂಧಿಸಿದ ಕೈಗಾರಿಕಾ ಘಟಕಗಳ ಭೌತಿಕ ಪರಿಶೀಲನೆಯನ್ನೂ ನಡೆಸಲಾಗುತ್ತದೆ.

11 ಜಿಲ್ಲೆಗಳ ಪಟ್ಟಿಯಲ್ಲಿ ಬಾಗಲಕೋಟೆ

ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಈಗ ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ, ವಿಜಯನಗರ, ಬೆಳಗಾವಿ, ಗದಗ, ಹಾವೇರಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳು ಸೇರಿವೆ.

ಇದನ್ನೂ ಓದಿದ್ದೀರಾ? ತೇರದಾಳ | ಜನರ ಬಳಿಗೆ ಸರ್ಕಾರ: 418 ಅಹವಾಲು ಸ್ವೀಕಾರ, 12ಕ್ಕೆ ಪರಿಹಾರ

ಬಾಗಲಕೋಟೆ ಜಿಲ್ಲೆ ಯೋಜನೆಗೆ ಸೇರ್ಪಡೆಯಾಗಿರುವುದರಿಂದ ಹೊಸ ಕೈಗಾರಿಕೆಗಳ ಸ್ಥಾಪನೆ, ಖಾಸಗಿ ಹೂಡಿಕೆ ಹಾಗೂ ಸ್ಥಳೀಯ ಯುವಜನರಿಗೆ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...