ಹೇರ್‌ ಡ್ರೈಯರ್ ಬ್ಲಾಸ್ಟ್, ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರ

Date:

Advertisements

ಮನೆಯಲ್ಲಿ ಹೇರ್‌ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರಗೊಂಡಿರುವ ಭಯಾನಕ ಘಟನೆ ಇಳಕಲ್ ನಗರದಲ್ಲಿ ನಡೆದಿದೆ.

ಬಸವನಗರದ ನಿವಾಸಿ ಶಶಿಕಲಾ ಎನ್ನುವವರ ವಿಳಾಸ ನೀಡಿ ರಕ್ಕಸಗಿ ಗ್ರಾಮದ ಬಸವರಾಜೇಶ್ವರಿ ಯರನಾಳ ಎಂಬುವವರು ಆನ್‌ಲೈನ್ ಮೂಲಕ ಹೇರ್ ಡ್ರೈಯರ್ ಖರೀದಿಸಿದ್ದರು. ಪಾರ್ಸೆಲ್ ಓಪನ್ ಮಾಡಿ ಸ್ವಿಚ್ ಆನ್ ಮಾಡಿದ ಕೂಡಲೇ ಹೇ‌ರ್ ಡ್ರೈಯರ್ ಬ್ಲಾಸ್ಟ್ ಆಗಿದೆ.

ಮಹಿಳೆ ಬಸವರಾಜೇಶ್ವರಿ ಯರನಾಳ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇರ್ ಡ್ರೈಯರ್ ಬ್ಲಾಸ್ಟ್‌ನಿಂದ ಮುಂಗೈ ಹಾಗೂ ಬೆರಳುಗಳು ಛಿದ್ರ ಛಿದ್ರವಾಗಿ, ಮನೆಯಲ್ಲಿ ರಕ್ತ ಚೆಲ್ಲಾಡಿದೆ. ಘಟನೆಯಲ್ಲಿ ಎರಡು ಕೈಗಳ 8 ಬೆರಳುಗಳನ್ನು ಮಹಿಳೆ ಕಳೆದೆಕೊಂಡಿದ್ದಾರೆ.

Advertisements

ಬಾಗಲಕೋಟೆ ಎಸ್​ಪಿ ಅಮರನಾಥ್​ ರೆಡ್ಡಿ ಅವರು ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೇರ್ ಡ್ರೈಯರ್ ಪ್ರಾಡಕ್ಟ್ ಮ್ಯಾನುವಲ್​​ನಲ್ಲಿನ ಸೂಚನೆ ಪಾಲಿಸಿಲ್ಲ. ಮ್ಯಾನುವಲ್ ಪಾಲಿಸದೇ ಆನ್ ಮಾಡಿದ್ದಕ್ಕೆ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಹೇರ್ ಡ್ರೈಯರ್ ಬ್ಲಾಸ್ಟ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಇಳಕಲ್ ಠಾಣೆಯ ಪೊಲೀಸರು ತಜ್ಞರ ತಂಡದಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

ಬಸವನಗರದ ಶಶಿಕಲಾ ಎಂಬವರ ಹೆಸರಿಗೆ ಬಾಗಲಕೋಟೆಯ ಡಿಟಿಡಿಸಿ ಕೋರಿಯರ್ ಮೂಲಕ ಈ ಹೇರ್‌ ಡ್ರೈಯರ್ ಬಂದಿದೆ. ಕೋರಿಯರ್ ಬಾಯ್ ಶಶಿಕಲಾ ಅವರ ನಂಬರ್‌ಗೆ ಕಾಲ್ ಮಾಡಿದಾಗ, ‘ನಾನು ಊರಲ್ಲಿ ಇಲ್ಲ ಪಕ್ಕದ ಮನೆಯ ಬಸವರಾಜೇಶ್ವರಿ ಅವರ‌ ಮನೆಯಲ್ಲಿ ಪಾರ್ಸೆಲ್ ಕೊಡಲು ಹೇಳಿದ್ದರು. ‌ಅಲ್ಲದೇ ನಾನು ಯಾವುದೇ ಆನ್‌ ಲೈನ್ ಪ್ರಾಡಕ್ಟ್‌ ಆರ್ಡರ್‌ ಮಾಡಿಲ್ಲ. ಅದರಲ್ಲಿ ಏನಿದೆ’ ಎಂದು ಪ್ರಶ್ನಿಸಿದ್ದರು. ಕೋರಿಯರ್ ಪಾರ್ಸೆಲ್ ಪಡೆದ ಬಸವರಾಜೇಶ್ವರಿ ಯರನಾಳ ಅವರು ಬಾಕ್ಸ್‌ ತೆರೆದು ನೋಡಿದಾಗ ಹೇರ್ ಡ್ರೈಯರ್ ಇದೆ ಎಂದು ತಿಳಿಸಿದ್ದಾರೆ. ಅದೇ ವೇಳೆಗೆ ಪಕ್ಕದ ಮನೆಯವರು ಬಂದಿದ್ದು, ಆನ್ ಮಾಡಿ ತೋರಿಸಿ ಎಂದು ಕೇಳಿದಾಗ ಬಸವರಾಜೇಶ್ವರಿ ಅದನ್ನು ಆನ್ ಮಾಡಲು ವಿದ್ಯುತ್ ಸ್ವಿಚ್ ಬೋರ್ಡ್‌ಗೆ ಹಾಕಿ ಆನ್ ಮಾಡಿದ್ದರು. ಆಗ ಸ್ಪೋಟಗೊಂಡಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಶಶಿಕಲಾ ಅವರು ಹೇರ್ ಡ್ರೈಯರ್‌ ಆರ್ಡರ್‌ ಮಾಡಿರಲಿಲ್ಲ. ಅವರ ಹೆಸರಿನಲ್ಲಿ ಪಾರ್ಸೆಲ್ ಹೇಗೆ ಬಂತು? ಡ್ರೈಯರ್ ಆರ್ಡರ್‌ ಮಾಡಿದವರು ಯಾರು, ಹಣ ಯಾರು ಸಂದಾಯ ಮಾಡಿದರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಸವರಾಜೇಶ್ವರಿ ಪತಿ ಪಾಪಣ್ಣ ಯರನಾಳ ಸೈನಿಕರಾಗಿದ್ದು, 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಮೃತಪಟ್ಟಿದ್ದರು. ಸದ್ಯ ಬಸವರಾಜೇಶ್ವರಿ ಅವರು ಮಕ್ಕಳೊಂದಿಗೆ ಇಳಕಲ್ಲದಲ್ಲಿ ವಾಸಿಸುತ್ತಿದ್ದಾರೆ. ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ, ಘಟನೆಯ ಮಾಹಿತಿ ಪಡೆದು, ಗಾಯಾಳುವಿಗೆ ಸಾಂತ್ವನ ಹೇಳಿದರು. ಇಳಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X