ಹುನಗುಂದ | ಬೆಳೆ ಹಾನಿ: ಸಮಗ್ರ ವರದಿ ಸಲ್ಲಿಕೆಗೆ ವಿಜಯಾನಂದ ಕಾಶಪ್ಪನವರ ಸೂಚನೆ

Date:

ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಇಳಕಲ್ ತಾಲ್ಲೂಕಿನ ಹೇರೂರು ಹಾಗೂ ಹುನಗುಂದ ತಾಲ್ಲೂಕಿನ ಅಮರಾವತಿ ಮತ್ತು ರಕ್ಕಸಗಿ ಗ್ರಾಮಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ತೊಗರಿ ಹಾಗೂ ಇತರೆ ಬೆಳೆಗಳನ್ನು ಪರಿಶೀಲಿಸಿದ ಸಚಿವರು, ರೈತರು ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಂದ ಬೆಳೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ಹೇರೂರು ಗ್ರಾಮದ ರೈತರು, “ಈ ಬಾರಿ ಮಳೆ ಕೊರತೆಯಿಂದ ತೊಗರಿ ಬೆಳೆ ತೀವ್ರ ಹಾನಿಗೊಳಗಾಗಿದೆ. ಆರು ಎಕರೆಯಲ್ಲಿ ಬೆಳೆದ ಬೆಳೆಯಿಂದ ಹತ್ತು ಕ್ವಿಂಟಲ್ ತೊಗರಿ ಬಂದರೂ ಅದೇ ಹೆಚ್ಚು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು” ಎಂದು ಮನವಿ ಸಲ್ಲಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಅಂಟರತಾನಿ ಮಾತನಾಡಿ, ಹುನಗುಂದ ಹಾಗೂ ಇಳಕಲ್ ತಾಲ್ಲೂಕುಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಈಗ ಉತ್ತಮ ಮಳೆಯಾದರೂ ಇಳುವರಿಯಲ್ಲಿ ಗಣನೀಯ ಪ್ರಮಾಣದ ಏರಿಕೆ ಸಾಧ್ಯವಿಲ್ಲ. ಎರಡೂ ತಾಲ್ಲೂಕುಗಳಲ್ಲಿ ಶೇ. ೫೦ರಿಂದ ೬೦ರಷ್ಟು ಇಳುವರಿ ಕುಸಿತವಾಗುವ ಸಾಧ್ಯತೆ ಇದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಇದೇ ವೇಳೆ, ಹುನಗುಂದ ತಾಲ್ಲೂಕಿನಲ್ಲಿ ೧೪,೨೩೬ ಹಾಗೂ ಇಳಕಲ್ ತಾಲ್ಲೂಕಿನಲ್ಲಿ ೧೧,೫೯೩ ರೈತರು ಬೆಳೆ ವಿಮೆ ಮಾಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದರು.

ಪರಿಶೀಲನಾ ವೇಳೆ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಕೃಷಿ ತಾಂತ್ರಿಕ ಅಧಿಕಾರಿ ಬಸವರಾಜ ಟಕ್ಕಳಕಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಜಬ್ಬಾರ್ ಕಲಬುರ್ಗಿ, ಎನ್.ಎಂ. ಸಂದಿಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...