ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕವು ಆಗಸ್ಟ್ 1ರಿಂದ 15ರವರೆಗೆ ‘ಜಾಬ್ ಬ್ರಿಡ್ಜ್’ ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದೆ.
ಇಳಕಲ್ನ ಜಮಾಅತೆ ಇಸ್ಲಾಮಿ ಹಿಂದ್(JIH) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಇಲಕಲ್ ಅಧ್ಯಕ್ಷ ಹುಸೈನ್ ಭಾಷಾ ಸೋಲಿಬಾವಿ ಅವರು ‘ಜಾಬ್ ಬ್ರಿಡ್ಜ್’ ವೆಬ್ಸೈಟ್ನ ಪೋಸ್ಟರ್ ಲೋಕಾರ್ಪಣೆ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯ ಕಾರ್ಯದರ್ಶಿ ಮುರ್ತುಜಾ ಕಕ್ಬಾಲ್, “ಆಧುನಿಕ ಕಾಲದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉದ್ಯೋಗದ ಹೆಸರಿನಲ್ಲಿ ಯುವಕರನ್ನು ವಂಚಿಸುವ ಪ್ರಕರಣಗಳೂ ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಜಾಬ್ ಬ್ರಿಡ್ಜ್’ ಎಂಬ ದೀರ್ಘಕಾಲಿಕ ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.
“ಜಾಬ್ ಬ್ರಿಡ್ಜ್ ಯೋಜನೆಯ ಮೂಲಕ ಕಂಪನಿಗಳು ಹಾಗೂ ಉದ್ಯಮಿಗಳು ತಮ್ಮ ಉದ್ಯೋಗಾವಕಾಶಗಳ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬಹುದಾಗಿದೆ. ಅದೇ ವೇಳೆ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಸೂಕ್ತ ಮಾಹಿತಿಯನ್ನು ತಲುಪಿಸಿ, ಇಬ್ಬರ ನಡುವೆ ಸಂಪರ್ಕ ಸಾಧಿಸುವ ಕೆಲಸವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕೈಗೊಳ್ಳಲಿದೆ. ಈ ಯೋಜನೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅಗತ್ಯ” ಎಂದು ಅವರು ಹೇಳಿದರು.
ಇದನ್ನೂ ಓದಿದ್ದೀರಾ? ಸೋಲಿಡಾರಿಟಿ ಯೂತ್ ಮೂವ್ಮೆಂಟ್ನಿಂದ ಯುವಕರಿಗಾಗಿ ‘ಜಾಬ್ ಬ್ರಿಡ್ಜ್’ ವೆಬ್ ಸೈಟ್ ಲೋಕಾರ್ಪಣೆ
ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು www.jobbridgenode.com ವೆಬ್ಸೈಟ್ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 6366234200 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಇಲಕಲ್ ನಗರಾಧ್ಯಕ್ಷ ಮೊಹಮ್ಮದ್ ಸಿರಾಜ್ ಹುಣಚಗಿ, ಹಬೀಬಿ ಸೇರಿದಂತೆ ಪ್ರಮುಖರು ಇದ್ದರು.




