ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

Date:

Advertisements

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ ಇರುವ ಚೌಧರಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯಾವುದೇ ಮುಖ್ಯ ಕಾರಣವಿಲ್ಲದೆ ಸುಮಾರು 150 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿ ಸಿಪಿಐಎಂ ಮತ್ತು ಸಿಐಟಿಯು ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

“ಹೆಂಗಸರ ಸಮಸ್ಯೆ, ತುರ್ತು ಸಂದರ್ಭದಲ್ಲಿ ರಜೆ ಮತ್ತಿತರ ವಿಚಾರಗಳಿಗೂ ಮಾನವೀಯತೆ ತೋರುವುದಿಲ್ಲ. ಬುಧವಾರ ಸಂಜೆ 5.30 ಗಂಟೆಗೆ ಬಂದ ಅಧಿಕಾರಿಗಳು, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ಹೇಳಿ ಹೊರಟರು. ನಮ್ಮ ಮುಂದಿನ ಗತಿಯೇನು?” ಎಂದು ಪ್ರತಿಭಟನಾಕಾರರು ನೋವು ತೋಡಿಕೊಂಡರು.

ಈ ವೇಳೆ ಮಾತನಾಡಿದ ಸಿಐಟಿಯು ಮುಖಂಡ ಕೆ.ಮುನಿಯಪ್ಪ, “ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಏಕಾಏಕಿ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮತ್ತು ನೋಟಿಸ್ ನೀಡದೇ ಕೆಲಸದಿಂದ ತೆಗೆದು ಹಾಕಲಾಗಿದೆ. ಯಾವುದೇ ಕಾರ್ಮಿಕನನ್ನು ಕೆಲಸದಿಂದ ತೆಗೆಯಬೇಕಾದರೆ ಹಲವಾರು ನಿಯಮ ನಿಬಂಧನೆಗಳಿರುತ್ತವೆ. ಆದರೆ ಈ ಫ್ಯಾಕ್ಟರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲ, ಮೇಲಾಧಿಕಾರಿಗಳು ನಿಂದಿಸುತ್ತಾರೆ ಎಂಬ ದೂರುಗಳಿವೆ. ಕಾರ್ಮಿಕ ವಿರೋಧಿ ನಿಲುವುಗಳನ್ನು ಅನುಸರಿಸುತ್ತಿದ್ದು, ಕೂಡಲೇ ಅವರ ಕ್ಷಮೆಯಾಚಿಸಬೇಕು” ಎಂದರು.

Advertisements

ಗಾರ್ಮೆಂಟ್ಸ್ ನ ಎಚ್.ಆರ್ ಮ್ಯಾನೇಜರ್ ಮಹೇಂದ್ರ ಮಾತನಾಡಿ, “ಪ್ರೊಡಕ್ಷನ್ ಕಡಿಮೆಯಾಗಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಸೂಚಿಸಲಾಗಿತ್ತು. ನಮ್ಮ ಗಾರ್ಮೆಂಟ್ಸ್ ಮಾಲೀಕರು ವಿದೇಶದಲ್ಲಿದ್ದು, ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹಾಗಾಗಿ ನಾಳೆಯಿಂದ ಕೆಲಸಕ್ಕೆ ಬರಬಹುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

ಚೌಧರಿ ಗಾರ್ಮೆಂಟ್ಸ್ ಕಾರ್ಮಿಕರನ್ನು ಏಕಾಏಕಿ ಕೆಲಸಕ್ಕೆ ಬರಬೇಡಿ ಎಂಬ ವಿಚಾರವಾಗಿ ಸ್ಥಳಕ್ಕೆ ಭೇಟಿ ನೀಡಲಾಗಿದ್ದು, ಅಲ್ಲಿನ ಮಾಲೀಕರು, ಆಡಳಿತ ಮಂಡಳಿಯವರು ಸಭೆ ನಡೆಸಿ, ನಿರ್ಧಾರ ತೆಗೆದುಕೊಳ್ಳಬೇಕು. ಕಾರ್ಮಿಕ ಕಾನೂನುಗಳ ಅಡಿಯಲ್ಲೆ ನಿರ್ಧಾರ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಯಾವುದೇ ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಅಡ್ಡಿ ಪಡಿಸಬಾರದು ಎಂದು ಎಚ್.ಆರ್.ಮ್ಯಾನೇಜರ್ ಮತ್ತಿತರರಿಗೆ ಸೂಚಿಸಲಾಗಿದೆ- ರಾಕೇಶ್, ಕಾರ್ಮಿಕ ನಿರೀಕ್ಷಕ ,ಬಾಗೇಪಲ್ಲಿ

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ಜಿ.ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ ಸೇರಿದಂತೆ ಹಲವಾರು ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X