ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

Date:

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ ಇರುವ ಚೌಧರಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯಾವುದೇ ಮುಖ್ಯ ಕಾರಣವಿಲ್ಲದೆ ಸುಮಾರು 150 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿ ಸಿಪಿಐಎಂ ಮತ್ತು ಸಿಐಟಿಯು ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

- Advertisement -

“ಹೆಂಗಸರ ಸಮಸ್ಯೆ, ತುರ್ತು ಸಂದರ್ಭದಲ್ಲಿ ರಜೆ ಮತ್ತಿತರ ವಿಚಾರಗಳಿಗೂ ಮಾನವೀಯತೆ ತೋರುವುದಿಲ್ಲ. ಬುಧವಾರ ಸಂಜೆ 5.30 ಗಂಟೆಗೆ ಬಂದ ಅಧಿಕಾರಿಗಳು, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ಹೇಳಿ ಹೊರಟರು. ನಮ್ಮ ಮುಂದಿನ ಗತಿಯೇನು?” ಎಂದು ಪ್ರತಿಭಟನಾಕಾರರು ನೋವು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ವೇಳೆ ಮಾತನಾಡಿದ ಸಿಐಟಿಯು ಮುಖಂಡ ಕೆ.ಮುನಿಯಪ್ಪ, “ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಏಕಾಏಕಿ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮತ್ತು ನೋಟಿಸ್ ನೀಡದೇ ಕೆಲಸದಿಂದ ತೆಗೆದು ಹಾಕಲಾಗಿದೆ. ಯಾವುದೇ ಕಾರ್ಮಿಕನನ್ನು ಕೆಲಸದಿಂದ ತೆಗೆಯಬೇಕಾದರೆ ಹಲವಾರು ನಿಯಮ ನಿಬಂಧನೆಗಳಿರುತ್ತವೆ. ಆದರೆ ಈ ಫ್ಯಾಕ್ಟರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲ, ಮೇಲಾಧಿಕಾರಿಗಳು ನಿಂದಿಸುತ್ತಾರೆ ಎಂಬ ದೂರುಗಳಿವೆ. ಕಾರ್ಮಿಕ ವಿರೋಧಿ ನಿಲುವುಗಳನ್ನು ಅನುಸರಿಸುತ್ತಿದ್ದು, ಕೂಡಲೇ ಅವರ ಕ್ಷಮೆಯಾಚಿಸಬೇಕು” ಎಂದರು.

ಗಾರ್ಮೆಂಟ್ಸ್ ನ ಎಚ್.ಆರ್ ಮ್ಯಾನೇಜರ್ ಮಹೇಂದ್ರ ಮಾತನಾಡಿ, “ಪ್ರೊಡಕ್ಷನ್ ಕಡಿಮೆಯಾಗಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಸೂಚಿಸಲಾಗಿತ್ತು. ನಮ್ಮ ಗಾರ್ಮೆಂಟ್ಸ್ ಮಾಲೀಕರು ವಿದೇಶದಲ್ಲಿದ್ದು, ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹಾಗಾಗಿ ನಾಳೆಯಿಂದ ಕೆಲಸಕ್ಕೆ ಬರಬಹುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

ಚೌಧರಿ ಗಾರ್ಮೆಂಟ್ಸ್ ಕಾರ್ಮಿಕರನ್ನು ಏಕಾಏಕಿ ಕೆಲಸಕ್ಕೆ ಬರಬೇಡಿ ಎಂಬ ವಿಚಾರವಾಗಿ ಸ್ಥಳಕ್ಕೆ ಭೇಟಿ ನೀಡಲಾಗಿದ್ದು, ಅಲ್ಲಿನ ಮಾಲೀಕರು, ಆಡಳಿತ ಮಂಡಳಿಯವರು ಸಭೆ ನಡೆಸಿ, ನಿರ್ಧಾರ ತೆಗೆದುಕೊಳ್ಳಬೇಕು. ಕಾರ್ಮಿಕ ಕಾನೂನುಗಳ ಅಡಿಯಲ್ಲೆ ನಿರ್ಧಾರ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಯಾವುದೇ ಕಾರ್ಮಿಕರನ್ನು ಕೆಲಸಕ್ಕೆ ಬರದಂತೆ ಅಡ್ಡಿ ಪಡಿಸಬಾರದು ಎಂದು ಎಚ್.ಆರ್.ಮ್ಯಾನೇಜರ್ ಮತ್ತಿತರರಿಗೆ ಸೂಚಿಸಲಾಗಿದೆ- ರಾಕೇಶ್, ಕಾರ್ಮಿಕ ನಿರೀಕ್ಷಕ ,ಬಾಗೇಪಲ್ಲಿ

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ಜಿ.ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ ಸೇರಿದಂತೆ ಹಲವಾರು ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...