ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಗೆ ಸಿಗದ ಸಚಿವ ಸ್ಥಾನ : ಮೆಣಸಿನಕಾಯಿ ತಿಂದು ಬೆಂಬಲಿಗರಿಂದ ವಿನೂತನ ಪ್ರತಿಭಟನೆ

Date:

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಾಗೇಪಲ್ಲಿ,ಚೇಳೂರು ಸೇರಿದಂತೆ ಗುಡಿಬಂಡೆ ಸುತ್ತಮುತ್ತಲಿನ ತಾಲೂಕುಗಳಲ್ಲಿ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ಈ ಅಸಮಾಧಾನದ ಬಿಸಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೂರು ತಾಲೂಕುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಕಾಂಗ್ರೆಸ್ ಹೈಕಮಾಂಡ್ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು.

- Advertisement -

ಶಾಸಕರಿಗೆ ಸಚಿವ ಸ್ಥಾನ ಸಿಗದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆಂಬಲಿಗರು ಹಾಗೂ ಅಭಿಮಾನಿಗಳು ರಸ್ತೆಗಿಳಿದು ಬೃಹತ್ ಪ್ರತಿಭಟನೆ ಹಾಗೂ ಬೈಕ್ ರ್ಯಾಲಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಹಸಿ ಮೆಣಸಿನಕಾಯಿ ತಿನ್ನುವ ಮೂಲಕ ಅತ್ಯಂತ ವಿನೂತನ ರೀತಿಯಲ್ಲಿ ತಮ್ಮ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ನರೇಂದ್ರ ಮಾತನಾಡಿ ನಮ್ಮ ಕ್ಷೇತ್ರದ ಶಾಸಕರಿಗೆ ಹೈಕಮಾಂಡ್ ಸಿಹಿ ನೀಡುವ ಬದಲಿಗೆ ಖಾರ ನೀಡಿದೆ. ಹೈಕಮಾಂಡ್ ನಮಗೆ ಸಿಹಿ ಕೊಟ್ಟಿದ್ದರೆ ನಾವು ಸಂಭ್ರಮದಿಂದ ಸಿಹಿ ಹಂಚಿ ತಿನ್ನುತ್ತಿದ್ದೆವು. ಆದರೆ ನಮಗೆ ಅನ್ಯಾಯ ಮಾಡಿ ಖಾರ ನೀಡಿರುವುದರಿಂದ, ನಾವು ಹಸಿ ಮೆಣಸಿನಕಾಯಿ ತಿನ್ನುವ ಮೂಲಕವೇ ನಮ್ಮ ಅಸಮಾಧಾನ ಮತ್ತು ಕಟು ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಿದ್ದೇವೆ” ಎಂದು ಹೈಕಮಾಂಡ್ ನಿರ್ಧಾರದ ವಿರುದ್ಧ ಚಾಟಿ ಬೀಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ.ವಿ.ಪೂಜಪ್ಪ, ಕೋಟಪ್ಪ ,ನಂಜುಂಡ, ಬಿ.ವಿ.ವೆಂಕಟರವಣ ,ಕೊಮುಲ್ ಮಂಜುನಾಥ್ ರೆಡ್ಡಿ, ಪಿ.ಮಂಜುನಾಥ್ ರೆಡ್ಡಿ, ಬೂರಗಮಡಗು ನರಸಿಂಹಪ್ಪ, ಟಿ.ಶ್ರೀನಿವಾಸ್, , ಸೋಮಶೇಖರ್, ಲಕ್ಷ್ಮೀಪತಿ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ ,ಆನಂದ್,ಶ್ರೀನಿವಾಸ್ ,ಪ್ರಭಾಕರ್ ರೆಡ್ಡಿ, ಮನ್ಸೂರ್, ಸೋಮಶೇಖರ್, ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...