ಬಳ್ಳಾರಿ | ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ; ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ

Date:

Advertisements

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ(ಜಿಟಿಟಿಸಿ ತರಬೇತಿ) ಹಾಗೂ ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ಬಳ್ಳಾರಿ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಜನರಿಗೆ ‘ಟೂಲ್‌ರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್ಎಸ್ಎಲ್‌ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಗ್ರೈಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಹಾಗೂ ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಅಲ್ಲದೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.

Advertisements

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಆಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುತ್ತದೆ.

ಸರ್ಕಾರದ ವಿವಿಧ ಯೋಜನೆಯಡಿ ʼಮೆಕ್ಯಾನಿಕಲ್–ಕ್ಯಾಡ್/ಕಾಮ್, “ಎಲೆಕ್ಟ್ರಾನಿಕ್ಸ್‌-ಆಟೋಮೇಶನ್ ಮನೆ/ಕೈಗಾರಿಕೆ, ಪಿಎಲ್‌ಸಿ ಪ್ರೋಗ್ರಾಮಿಂಗ್, ಅಡ್ವಾನ್ಸ್ ಹೈಡ್ರಾಲಿಕ್ಸ್ ಮತ್ತು ನ್ಯೂಮ್ಯಾಟಿಕ್ಸ್ʼ, ʼಎಲೆಕ್ಟ್ರಿಕಲ್- ಮನೆ/ಕೈಗಾರಿಕೆ ಇನ್ಸಾಲೇಷನ್, ಸಿಕ್ಯಾಡ್ ಮತ್ತು ಕಂಪ್ಯೂಟರ್ ಸೈನ್ಸ್ – ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಉಚಿತ ಮತ್ತು ಪಾವತಿ ತಾಂತ್ರಿಕ ಕೌಶಲ್ಯ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಲಮಟ್ಟಿ ಜಲಾಶಯದ ನೀರು ಸಂಗ್ರಹ ಹೆಚ್ಚಳಕ್ಕೆ ಆಗ್ರಹ; ಜೂ.30ರಂದು ಬೃಹತ್‌ ರೈತ ಹೋರಾಟ

ಕನಿಷ್ಠ 8ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಬಿಇ ಉತ್ತೀರ್ಣರಾದ 16 ರಿಂದ 35 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರು. ತರಬೇತಿ ಪಡೆಯಲು ಆದಾಯದ ಮಿತಿ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆಂಟ್‌ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ಐಟಿಐ ತರಬೇತಿ ಕೇಂದ್ರ ಅಥವಾ ಮೊ.9972320076, 9620057086ಕ್ಕೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X