ಬಳ್ಳಾರಿ | ಮತದಾರ ಪಟ್ಟಿಯಿಂದ ಸುಮಾರು 1.2 ಲಕ್ಷ ಹೆಸರುಗಳು ಡಿಲೀಟ್

Date:

ಬಳ್ಳಾರಿ ಜಿಲ್ಲೆಯಲ್ಲಿ 1.17 ಲಕ್ಷ ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇವುಗಳಲ್ಲಿ ಹಲವು ಪುನಾರಾವರ್ತಿತ ಹೆಸರುಗಳು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

2022ರ ನವೆಂಬರ್‌ನಲ್ಲಿಯೂ ಮತದಾರರ ಹೆಸರುಗಳು ತೆಗೆದುಹಾಕಲಾಗಿತ್ತೆಂದು ಆಗ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಅದಾದ ಬಳಿಕ, ಇದೀಗ ಮತ್ತೆ ಜಿಲ್ಲೆಯ ಹಲವಾರು ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ.

ಜಿಲ್ಲೆಯಲ್ಲಿ 1.17 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅವುಗಳಲ್ಲಿ ಕಂಪ್ಲಿ ಮತ್ತು ಸಂಡೂರು ತಾಲೂಕುಗಳ ಮತದಾರರ ಹೆಸರುಗಳನ್ನು ಹೆಚ್ಚಿನವು. ಕನಿಷ್ಠ 50,000 ಹೆಸರುಗಳು ಎರಡು ಅಥವಾ ನಾಲ್ಕು ಬಾರಿ ಮತದಾರ ಪಟ್ಟಿಯಲ್ಲಿದ್ದವು. ಅಂತಹ ಹೆಸರುಗಳನ್ನು ತೆಗೆಯಲಾಗಿದೆ. ಅಲ್ಲದೆ, ಮರಣ ಹೊಂದಿದವರ 20,000 ಹೆಸರುಗಳನ್ನೂ ಕೈಬಿಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾವು ನಮೂನೆ-7 ಸಲ್ಲಿಸಿದ ನಂತರ ಪುನರಾವರ್ತಿತ ಹೆಸರುಗಳನ್ನು ತೆಗೆದುಹಾಕಿದ್ದೇವೆ. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಅಳಿಸುವ ಮತ್ತು ಸೇರಿಸುವ ಸಮಯದಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಿದ್ದೇವೆ” ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಜಿಲ್ಲೆಯಾದ್ಯಂತ 33 ಸಾವಿರ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ” ಎಂದು ಆಯೋಗದ ಅಧಿಕಾರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೈತಿಕ ಪೊಲೀಸ್‌ಗಿರಿ ಹತ್ಯೆಗೆ ಸಿಎಂ ಹೊಣೆ; ಡಿಕೆಶಿ ಆಗ್ರಹ

ಕಳೆದ ಹಲವು ವರ್ಷಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

“ಜನರು ತಾವು ಸ್ಥಳಾಂತರಗೊಂಡ ಸ್ಥಳಗಳಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಆದರೆ, ಹಿಂದಿನ ಕ್ಷೇತ್ರದಲ್ಲಿ ಅವರ ಹೆಸರನ್ನು ಅಳಿಸಿಲ್ಲ. ಇದರಿಂದಾಗಿ ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಒಬ್ಬರದ್ದೇ ಹೆಸರುಗಳು ಕಾಣಿಸಿಕೊಂಡಿವೆ. ನಾವು ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ನಮೂದಾಗಿದ್ದ ಹೆಸರುಗಳನ್ನು ತೆಗೆದು ಹಾಕಿದ್ದೇವೆ. ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಲ್ಲ. ಪಟ್ಟಿಯಿಂದ ಹೆಸರುಗಳನ್ನು ಅಳಿಸುವಾಗ ನಾವು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇವೆ,” ಎಂದು ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.

“ಮೃತಪಟ್ಟವರ ಸುಮಾರು 20,000ಕ್ಕೂ ಹೆಚ್ಚು ಹೆಸರುಗಳು ಇನ್ನೂ ಪಟ್ಟಿಯಲ್ಲಿದ್ದವು. ಮೃತರ ಕುಟುಂಬದ ಸದಸ್ಯರಿಂದ ಅಧಿಕೃತ ಮಾಹಿತಿ ಪಡೆದು ಮೃತಪಟ್ಟವರ ಹೆಸರುಗಳನ್ನು ತೆಗೆದಿದ್ದೇವೆ” ಎಂದು ಮಾಲಪಾಟಿ ತಿಳಿಸಿದ್ದಾರೆ.

ಪುನರಾವರ್ತಿತ ಮತ್ತು ಮೃತಪಟ್ಟವರ ಹೆಸರುಗಳನ್ನು ತೆಗೆದು, ಹೊಸ ಮತದಾರರ ಹೆಸರನ್ನು ಸೇರಿಸುವುದರಲ್ಲಿ ಯಾವುದೇ ಎಂದು ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ...