ಚಾಮರಾಜನಗರ | ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮದ್ಯಾಹ್ನ 3ರ ಬಳಿಕ ಪ್ರವೇಶ ನಿಷೇಧ ಆದೇಶ ವಾಪಸ್

Date:

Advertisements

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ತಾಲೂಕು ಆಡಳಿತ ಫೆಬ್ರವರಿ 15 ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.

ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ಗುಂಡ್ಲುಪೇಟೆ ತಾಲೂಕು ತಹಶೀಲ್ದಾರ್‌ ಟಿ ರಮೇಶ್‌ ಬಾಬು ಅವರು ಫೆಬ್ರವರಿ 15ರಂದು ಆದೇಶ ಹೊರಡಿಸಿದ್ದರು. ಈ ಬಗ್ಗೆ ಭಾರೀ ಟೀಕೆ ಹಾಗೂ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಈ ಆದೇಶವನ್ನು ಹಿಂಪಡೆದಿದ್ದಾರೆ. ಈ ಮೂಲಕ ಹಿಂದಿನಂತೆ ಸಂಜೆ 4 ಗಂಟೆಯವರೆಗೆ ಹಿಮವದ್‌ ಗೋಪಾಲಸ್ವಾಮಿ ದರ್ಶನ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಯಾವುದೇ ಭರವಸೆ ಈಡೇರಿಸಿಲ್ಲ: ಕಾಶಿನಾಥ ಬಂಡಿ

Advertisements

ವನ್ಯ ಜೀವಿಗಳಿಗೆ ತೊಂದರೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ 3 ಗಂಟೆ ಬಳಿಕ ಬಸ್ ನಿಷೇಧದ ಆದೇಶವನ್ನು ಹೊರಡಿಸಿದ್ದರು. ಆದರೆ ಭಕ್ತರು ಮತ್ತು ಪ್ರವಾಸಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು ಸಮೀಪದ ಕನ್ನೇಗಾಲ ಗ್ರಾಮಸ್ಥರು ಆದೇಶ ಹಿಂಪಡೆಯುವಂತೆ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಕುರಿತು ಮೇಲಧಿಕಾರಿಗಳ ಜತೆ ಚರ್ಚಿಸಿದ ತಹಶೀಲ್ದಾರ್‌ 4 ಗಂಟೆವರೆಗೆ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮೊನ್ನೆ ಹೊರಡಿಸಿದ್ದ ಹೊಸ ಆದೇಶವನ್ನು ಹಿಂಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X