ಬೆಂಗಳೂರು | ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Date:

Advertisements

ಬೆಂಗಳೂರಿನಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ರೌಡಿಶೀಟರ್ ಪವನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ವಿಶ್ವಾಸ್‌ ಎಂಬಾತ ರೌಡಿಶೀಟರ್‌ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಇದನ್ನು ತಿಳಿದ ಪವನ್, ಯುವಕನನ್ನು ಬೆತ್ತಲೆಗೊಳಿಸಿದ್ದ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ಪವನ್‌ನನ್ನು ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ತುಮಕೂರಿನಲ್ಲಿ ಬಂಧಿಸಿದ್ದಾರೆ. ಆತನ ಕಾಲಿಗೆ ಗುಂಡೇಟು ಬಿದ್ದಿರುವುದರಿಂದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಯುವಕ ವಿಶ್ವಾಸ್‌ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ ಪವನ್ ತನ್ನ ಮೊಬೈಲ್ಅನ್ನು ಸ್ವಿಚ್‌ಆಫ್ ಮಾಡಿಕೊಂಡಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ, ಹಣಕ್ಕಾಗಿ ರಾತ್ರಿ ವೇಳೆ ವಾಹನಗಳಲ್ಲಿ ಬರುವವರನ್ನು ಅಡ್ಡಗಟ್ಟಿ ರಾಬರಿ ಮಾಡಲು ತಂತ್ರ ಎಣೆದಿದ್ದ, ಪವತ್, ಮಂಗಳವಾರ ಮುಂಜಾನೆ ತನ್ನ ಮೊಬೈಲ್ ಆನ್‌ ಮಾಡಿದ್ದಾನೆ. ಕೂಡಲೇ ನೆಟ್‌ವರ್ಕ್‌ ಆಧಾರದ ಮೇಲೆ ಆತ ಇರುವ ಸ್ಥಳವನ್ನು ಪತ್ತೆ ಹಚ್ಚಿದ ಪೊಲೀಸರು ಆತನಿಂದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.

Advertisements

ಈ ವೇಳೆ,​ ಕಾನ್ಸ್​ಟೇಬಲ್​ ವೆಂಕಟೇಶ್ ಎಂಬವರ ಮೇಲೆ ಆರೋಪಿ ಪವನ್ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್‌ ಸುಬ್ರಮಣ್ಯ ಅವರ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆರೋಪಿಯ ಕಾಲಿಗೆ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X