ಬೆಂಗಳೂರು | ಬನ್ನೇರುಘಟ್ಟ ಉದ್ಯಾನದಲ್ಲಿ 13 ಜಿಂಕೆಗಳು ನಿಗೂಢ ಸಾವು

Date:

Advertisements

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ 10 ದಿನಗಳಿಂದ 13 ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಜಿಂಕೆಗಳ ಪರಸ್ಪರ ಕಾದಾಟ ಮತ್ತು ಜಂತುಹುಳುಗಳ ಬಾಧೆಯಿಂದ ಕೆಲವು ಜಿಂಕೆಗಳು ಮೃತಪಟ್ಟಿವೆ. ಆದರೂ, ಇನ್ನೂ ಕೆಲವು ಜಿಂಕೆಗಳ ಸಾವಿಎ ಕಾರಣವೇನು ಎಂಬುದು ತಿಳಿದುಬಂದಿದೆ. ಮೃತಪಟ್ಟ ಕೆಲವು ಜಿಂಕೆಗಳ ಹೊಟ್ಟೆಯ ಭಾಗದಲ್ಲಿ ಊತ ಕಾಣಿಸಿಕೊಂಡಿತ್ತು ಎಂದು ಉದ್ಯಾನವನದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಸೇಂಟ್‌ ಜಾನ್ಸ್ ಆಸ್ಪತ್ರೆಯ ಉದ್ಯಾನದಲ್ಲಿದ್ದ 37 ಜಿಂಕೆಗಳನ್ನು ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಬನ್ನೇರುಘಟ್ಟ ಉದ್ಯಾನವನಕ್ಕೆ ಆಗಸ್ಟ್‌ 17ರಂದು ಹಸ್ತಾಂತರಿಸಲಾಗಿತ್ತು. ಆ ಜಿಂಕೆಗಳನ್ನು 10 ದಿನ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆ ಸಮಯದಲ್ಲೇ 9 ಜಿಂಕೆಗಳು ಸಾವನ್ನಪ್ಪಿದ್ದವು. ಸೋಮವಾರ ನಾಲ್ಕು ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

Advertisements

“ಜಿಂಕೆಗಳು ಅತ್ಯಂತ ಸೂಕ್ಷ್ಮ ಪ್ರಾಣಿಗಳು. ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಿದಾಗ, ಹೊಸ ಜಾಗಕ್ಕೆ ಹೊಂದಿಕೊಳ್ಳುವುದು ಕಷ್ಟ” ಎಂದು ಉದ್ಯಾನವನ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿರುವುದಾಗಿ ‘ಪಿವಿ’ ವರದಿ ಮಾಡಿದೆ.

“ಕ್ವಾರಂಟೈನ್‌ ಜಾಗದಲ್ಲಿ ಗಂಡು ಜಿಂಕೆಗಳೇ ಹೆಚ್ಚಾಗಿದ್ದವು. ಇದು ಜಿಂಕೆಗಳ ಮಿಲನದ ಸಮಯವಾದ್ದರಿಂದ ಹೆಣ್ಣು ಜಿಂಕೆಗಾಗಿ ಪರಸ್ಪರ ಕಾದಾಟದಿಂದಾಗಿ ಹೆಚ್ಚಿನ ಗಂಡು ಜಿಂಕೆಗಳು ಮೃತಪಟ್ಟಿವೆ.ಕೆಲವು ಜಿಂಕೆಗಳು ಜಂತುಹುಳು ಬಾಧೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಉದ್ಯಾನವನದಲ್ಲಿದ್ದ ಏಳು ಚಿರತೆ ಮರಿಗಳು ರಕ್ತಭೇದಿಯಿಂದ ಸಾವನ್ನಪ್ಪಿದ್ದವು. ಇದೀಗ, ಜಿಂಕೆಗಳ ಸರಣಿ ಸಾವು ಎದುರಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X