ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 25 ಲಕ್ಷ ಅಮೆರಿಕನ್ ಡಾಲರ್ ಸಿಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವು ಸಿಕ್ಕಿದ್ದು, ಸಿಕ್ಕಿರುವ ಹಣ ನಕಲಿನಾ ಎಂಬ ಪ್ರಶ್ನೆ ಮೂಡಿದೆ.

ನಾಗವಾರ ರೈಲು ಹಳಿ ಪಕ್ಕದ ಪೊದೆಯಲ್ಲಿ ಡಾಲರ್ ಮೌಲ್ಯದ ಕರೆನ್ಸಿಯ ಕಟ್ಟು ಇದ್ದ ಪ್ಲಾಸ್ಟಿಕ್ ಚೀಲವನ್ನು ಚಿಂದಿ ಆಯುವ ವ್ಯಕ್ತಿಗೆ  ಸಿಕ್ಕಿದೆ. ಈತ ಈ ಬಗ್ಗೆ ತನ್ನ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ. ಈ ನಡುವೆ ವಿಚಾರ ತಿಳಿದ ಮತ್ತೋರ್ವ ವ್ಯಕ್ತಿಯಿಂದ ಕಮಿಷನರ್‌ಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ನಂತರ ಈ ಬಗ್ಗೆ ಹೆಬ್ಬಾಳ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಮಾಹಿತಿ ನೀಡಿದ ಬೆನ್ನಲ್ಲೆ ಈ ಕರೆನ್ಸಿಯ ಅಸಲಿ ಕಹಾನಿಯ ಬಗ್ಗೆ ತಿಳಿಯಲು ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

Advertisements

ಚಿಂದಿ ಆಯುವ ವ್ಯಕ್ತಿಗೆ ದೊರೆತ ಅಮೆರಿಕನ್ ಡಾಲರ್‌ ನಕಲಿನಾ ಎಂಬ ಪ್ರಶ್ನೆ ಮೂಡಿದೆ. ಅನಾಮಿಕರು ಜೆರಾಕ್ಸ್‌ಗಳನ್ನು ಬಿಸಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸರು ಆರ್‌ಬಿಐಗೆ ಪತ್ರ ಬರೆದಿದ್ದಾರೆ. ಯುಎಸ್ ಕರೆನ್ಸಿ ಅಸಲಿ ಎಂದು ಆರ್​ಬಿಐ ಧೃಡಿಕರಿಸಿಲ್ಲ. ದೆಹಲಿಯ ಕಚೇರಿಯೊಂದರ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

ಪೊಲೀಸರು ದೊರೆತ ಅಷ್ಟು ಕರೆನ್ಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಡಾಲರ್‌​​ಗಳ ಜೊತೆ ವಿಶ್ವ ಸಂಸ್ಥೆಯ ಲೆಟರ್​ ಹೆಡ್​ನಲ್ಲಿರುವ ಪತ್ರ ಕೂಡ ಪತ್ತೆ ಆಗಿದೆ.

ಯುಎನ್​ನಿಂದ ಅಭಿವೃದ್ಧಿಗಾಗಿ ಹಣ ಕಳುಹಿಸಲಾಗಿದೆ. ಈ ಮಿಲಿಯನ್ಸ್ ಆಫ್ ಡಾಲರ್ಸ್ ಬಗ್ಗೆ ಗೌಪ್ಯತೆ ಕಾಪಾಡಿ ಎಂದು ಲೆಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X