ಬೆಂಗಳೂರು | 24 ವರ್ಷದ ಶಿಕ್ಷಕಿಯನ್ನು ಪ್ರೀತಿಸಿದ 17 ವರ್ಷದ ಬಾಲಕ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

Date:

Advertisements

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕ 24 ವರ್ಷದ ಶಿಕ್ಷಕಿಯನ್ನು ಪ್ರೀತಿ ಮಾಡಿದ ಕಾರಣಕ್ಕೆ ಹಲ್ಲೆಗೊಳಗಾಗಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸದ್ಯ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

Advertisements

17 ವರ್ಷದ ಬಾಲಕನ ಕುಟುಂಬ ಬೆಂಗಳೂರಿನ ನಾಗರಭಾವಿ ರಸ್ತೆಯ ಬೈರವೇಶ್ವರ ನಗರದಲ್ಲಿ ನೆಲೆಸಿದೆ. ಈತ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ. ಬಾಲಕ ನೆಲೆಸಿದ್ದ ಏರಿಯಾದ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ.

ಬಳಿಕ ಶಿಕ್ಷಕಿ ಮತ್ತು ಬಾಲಕ ಇಬ್ಬರು ಸ್ವಲ್ಪ ದಿನ ಸುತ್ತಾಡಿದ್ದಾರೆ. ಆಗಾಗ ಕರೆ ಮಾಡಿ ಮಾತಾಡಿದ್ದಾರೆ. ಈ ವಿಷಯ ಬಾಲಕನ ತಂದೆಗೆ ತಿಳಿದ ತಕ್ಷಣ ಆತ ಇಬ್ಬರಿಗೂ ಬೈದು ಬುದ್ಧಿವಾದ ಹೇಳಿದ್ದಾರೆ. ಈ ಘಟನೆ ಬಳಿಕ ಕೆಲವು ದಿನ ದೂರ ಇದ್ದ ಇಬ್ಬರು ಮತ್ತೆ ಕರೆ ಮಾಡಿ ಮಾತಾಡಲು ಆರಂಭಿಸಿದ್ದಾರೆ.

ಅಕ್ಟೋಬರ್ 1ರಂದು ಬಾಲಕನ ಹುಟ್ಟುಹುಬ್ಬ ಇದ್ದ ಹಿನ್ನೆಲೆ ಇಬ್ಬರೂ ಭೇಟಿಯಾಗಿದ್ದಾರೆ. ಬಸವೇಶ್ವರ ನಗರದ ಬೇಕರಿಯೊಂದರಲ್ಲಿ ಕೇಕ್ ಕತ್ತರಿಸಿ ಹುಟ್ಟಿದ ದಿನವನ್ನು ಆಚರಿಸಿದ್ದಾರೆ. ನಂತರ ಅಲ್ಲೇ ಸಮೀಪ ಇರುವ ಪಾರ್ಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದಾರೆ.

ಬಾಲಕ ಮತ್ತು ಶಿಕ್ಷಕಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತು ಮಾತನಾಡುವ ವೇಳೆ, ಈ ವಿಷಯ ಶಿಕ್ಷಕಿಯನ್ನು ಮದುವೆಯಾಗುವ ಹುಡುಗನಿಗೆ ತಿಳಿದಿದೆ. ಆತ ಶಿಕ್ಷಕಿಯ ತಮ್ಮನಿಗೆ ಈ ಬಗ್ಗೆ ಕರೆ ಮಾಡಿ ತಿಳಿಸಿದ್ದಾನೆ.

‘ನಮ್ಮ ಅಕ್ಕನ ಸಹವಾಸಕ್ಕೆ ಬರಬೇಡ’ ಎಂದು ಶಿಕ್ಷಕಿಯ ತಮ್ಮ ಶಶಾಂಕ್ ಬಾಲಕನ ಮೇಲೆ ಹಲ್ಲೆ ಮಾಡಿದ್ದಾನೆ.

ಬಾಲಕ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮತ್ತೆ ಎಚ್ಚರಿಕೆ ಕೊಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಭಾರಿ ಬೆಲೆ ತೆರಬೇಕಾಗಿದೆ: ಮುಖ್ಯಮಂತ್ರಿ ಚಂದ್ರು

ಮಗ ಗಾಯಗೊಂಡಿರುವುದನ್ನು ಕಂಡ ಬಾಲಕನ ತಂದೆ ಹಲ್ಲೆ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X