ಬೆಂಗಳೂರು | ಅರಣ್ಯ ಅಧಿಕಾರಿಗಳನ್ನು ಸತಾಯಿಸಿ ದಾರುಣ ಅಂತ್ಯ ಕಂಡ ಚಿರತೆ

Date:

Advertisements

ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್‌ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ ಚಿರತೆ ಕೊನೆಯುಸಿರೆಳೆದಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರು. ಚಿರತೆ ಸೆರೆಗಾಗಿ ಬೋನುಗಳನ್ನು ಇರಿಸಿದ್ದರು. ಆದರೆ, ಚಿರತೆ ಬೋನಿಗೆ ಬಿದ್ದಿರಲಿಲ್ಲ.

ಮೂರು ದಿನಗಳಲ್ಲಿ ಮೂವರ ಮೇಲೆ ಚಿರತೆ ದಾಳಿ ಮಾಡಿತ್ತು. ಹೀಗಾಗಿ, ಅರಣ್ಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದರು. ಚಿರತೆಯನ್ನು ಹೇಗಾದರೂ ಹಿಡಿಯಲೇಬೇಕೆಂಬ ಒತ್ತಡ ಅಧಿಕಾರಿಗಳ ಮೇಲಿತ್ತು.

Advertisements

ಹಳೆಯ ಕಟ್ಟಡಗಳು ಹಾಗೂ ಖಾಲಿ ಜಾಗಗಳಲ್ಲಿ ಬೆಳದಿದ್ದ ಪೊದೆಗಳಲ್ಲಿ ಚಿರತೆ ಅವಿತುಕೊಂಡಿತ್ತು. ಜೆಸಿಬಿಯಿಂದ ಪೊದೆಗಳನ್ನು ತೆರವುಗೊಳಿಸಿದ್ದ ಅಧಿಕಾರಿಗಳು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಶೂಟ್ ಮಾಡಿದ್ದರು.

ಬಳಿಕ, ಚರತೆಯನ್ನು ಸೆರೆಹಿಡಿದು ಜೈವಿಕ ಉದ್ಯಾನವನಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಆದರೆ, ಅರವಳಿಕೆ ನೀಡಲು ಶೂಟ್‌ ಮಾಡಿದ್ದರಿಂದ ಗಾಯಗೊಂಡಿದ್ದ ಚಿರತೆ ಸಾವನ್ನಪ್ಪಿದೆ. ಬನ್ನೇರುಘಟ್ಟ ಪಾರ್ಕ್‌ ಆಸ್ಪತ್ರೆಯಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

“ಈ ಹಿಂದಿನ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ ಹಿಡಿಯುವ ವೇಳೆ ಮೂವರ ಮೇಲೆ ದಾಳಿ ಮಾಡಿತ್ತು. ಈಗ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಲು ಬಂದಿದ್ದು, ಶೂಟ್ ಮಾಡಲಾಗಿದೆ” ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವು ತುಂಬಾ ನೋವುಂಟು ಮಾಡಿದೆ. ಪ್ರಾಣಿಗೆ ಬಲವಾದ ಟ್ರ್ಯಾಂಕ್ವಿಲೈಸರ್ ಮೂಲಕ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಅದು ಸಂಪೂರ್ಣವಾಗಿ ದುರ್ಬಲಗೊಳ್ಳುತ್ತದೆ. ಚಿರತೆ ಕಳೆದ 4 ದಿನಗಳಿಂದ ಏನನ್ನೂ ತಿಂದಿಲ್ಲ. ಇದು ದುರಂತ ಅಂತ್ಯ” ಎಂದು ನೆಟ್ಟಿಗರು ಕಂಬನಿ ಮಿಡಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X