ಬೆಂಗಳೂರು | ನೇಮಕಾತಿ ಆದೇಶಕ್ಕೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಮನವಿ

Date:

Advertisements

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ನನೆಗುದಿಗೆ ಬಿದ್ದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಆರಂಭಿಸುವಂತೆ ಹಾಗೂ ನ್ಯಾಯಾಲಯದ ಆದೇಶಕ್ಕೊಳಪಟ್ಟಂತಹ ಕಂಡೀಷನಲ್ ನೇಮಕಾತಿ ಆದೇಶ ನೀಡುವಂತೆ ಸಹಾಯಕ ಪ್ರಾಧ್ಯಾಪಕರ ಬಳಗದ ರಾಜ್ಯ ನಿಯೋಗ ಮನವಿ ಮಾಡಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು 2021ರ ಅಕ್ಟೋಬರ್‌ನಲ್ಲಿ ಹೊರಡಿಸಿತ್ತು. 2022 ರ ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಿತ್ತು. ಈ ವೇಳೆ ಭೂಗೋಳಶಾಸ್ತ್ರ ವಿಷಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡು ಬಂದಿತ್ತು. ಈ ಕುರಿತು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅಂತಿಮ ಆಯ್ಕೆ ಪಟ್ಟಿ ಸಲ್ಲಿಸಲಾಗಿತ್ತು” ಎಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಜೈಶಂಕರ್‌ ತಿಳಿಸಿದ್ದಾರೆ.

Advertisements

“ಕಳೆದ ಮಾರ್ಚ್ ತಿಂಗಳಲ್ಲಿ ಅಂತಿಮ ಪಟ್ಟಿ ಪ್ರಕಟಗೊಂಡಿತ್ತು. ಅದಾದ ನಂತರ ಯಾವುದೇ ಪ್ರಕ್ರಿಯೆಗಳು ಆರಂಭಗೊಂಡಿರುವುದಿಲ್ಲ. ಇದರಿಂದಾಗಿ ಪ್ರಾಮಾಣಿಕವಾಗಿ ಕಠಿಣ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯಥಿ೯ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾಜಿಕವಾಗಿ, ಆಥಿ೯ಕವಾಗಿ, ಮಾನಸಿಕವಾಗಿ ಜರ್ಜರಿತರಾಗಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಆಗ್ರಹ

ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಸಚಿವರು ಸ್ಪಂದಿಸುವುದಾಗಿ ತಿಳಿಸಿದ್ದಾರೆ. ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಕೂಡಲೇ ಸ್ಪಂದಿಸದೆ ಹೋದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಹಾಯಕ ಪ್ರಾಧ್ಯಾಪಕರ ಬಳಗ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X