ಬೆಂಗಳೂರು | ಅತ್ಯಾಚಾರ ಎಸಗಿ, ನಗ್ನ ಫೋಟೊ ವಿಡಿಯೊ ಚಿತ್ರೀಕರಿಸಿದ್ದ ಬ್ಯಾಡ್ಮಿಂಟನ್ ತರಬೇತುದಾರ ಬಂಧನ

Date:

Advertisements

ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ಬ್ಯಾಡ್ಮಿಂಟನ್ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಸುರೇಶ್ ಬಾಲಾಜಿ(26) ಬಂಧಿತ ಆರೋಪಿ. “ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ, ಆರೋಪಿಯ ವಿರುದ್ಧ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಎಂಟು ದಿನ ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ, ಆರೋಪಿಯ ಮೊಬೈಲ್‌ ಜಪ್ತಿ ಮಾಡಿಕೊಂಡು ಪರಿಶೀಲನೆ ನಡೆಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಬಾಲಕಿ ಸೇರಿದಂತೆ ಎಂಟು ಬಾಲಕಿಯರ ನಗ್ನ ಫೋಟೊಗಳು ಹಾಗೂ ವಿಡಿಯೊಗಳು ಮೊಬೈಲ್‌ನಲ್ಲಿ ಪತ್ತೆಯಾಗಿವೆ” ಎಂದು ಮೂಲಗಳು ತಿಳಿಸಿವೆ.

“ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಕೆಲವು ವರ್ಷಗಳಿಂದ ಹುಳಿಮಾವು ಬಳಿ ವಾಸವಿದ್ದು, ಬ್ಯಾಡ್ಮಿಂಟನ್‌ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ. ಆತ ಕೆಲಸ ಮಾಡುತ್ತಿದ್ದ ಕೋಚಿಂಗ್‌ ಕೇಂದ್ರಕ್ಕೆ ಎರಡು ವರ್ಷಗಳ ಹಿಂದೆ ಬಾಲಕಿ ಬ್ಯಾಡ್ಮಿಂಟನ್‌ ತರಬೇತಿಗೆ ಸೇರಿಕೊಂಡಿದ್ದಳು. ಆಕೆಯ ಸ್ನೇಹ ಸಂಪಾದಿಸಿದ್ದ ಆರೋಪಿ, ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಅಲ್ಲದೇ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದ” ಎಂದು ತಿಳಿದುಬಂದಿದೆ.

Advertisements

“ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಳಿಕ ಬಾಲಕಿ ಅಜ್ಜಿಯ ಮನೆಗೆ ತೆರಳಿದ್ದಳು. ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಅಜ್ಜಿಯ ಮೊಬೈಲ್‌ಗೆ ನಗ್ನ ಫೋಟೊಗಳು ರವಾನೆ ಆಗಿದ್ದವು. ಅದನ್ನು ಗಮನಿಸಿದ ಅಜ್ಜಿ, ತಕ್ಷಣ ಸಂತ್ರಸ್ತೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಯ ತಾಯಿಯು ಮಗಳನ್ನು ವಿಚಾರಿಸಿದಾಗ ತರಬೇತುದಾರ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಳು. ಪೋಷಕರು ನೀಡಿದ ದೂರು ಆದರಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ಆರೋಪಿಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ಹೇಳಿರುವುದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್‌ನಿಂದ​ ಅತ್ಯಾಚಾರ; 8 ಅಪ್ರಾಪ್ತೆಯರ ಮೇಲೂ ಲೈಂಗಿಕ ದೌರ್ಜನ್ಯ

“ನೃತ್ಯ ತರಬೇತಿ ಹಾಗೂ ಮನೆಪಾಠಕ್ಕೆ ಬಾಲಕಿ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಆರೋಪಿ ಮನೆಗೆ ಕರೆದೊಯ್ಯುತ್ತಿದ್ದ. ಲೈಂಗಿಕ ದೌರ್ಜನ್ಯ ಎಸಗಿ ಫೋಟೊ, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ” ಎಂದು ಮೂಲಗಳು ತಿಳಿಸಿವೆ

“ಬ್ಯಾಡ್ಮಿಂಟನ್‌ ತರಬೇತಿಗೆ ಬರುತ್ತಿದ್ದ ಬಾಲಕಿಯರ ಸ್ನೇಹ ಗಳಿಸುತ್ತಿದ್ದ ಆರೋಪಿ, ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಆ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕುತ್ತಿದ್ದ. ಆರೋಪಿ ಬೆದರಿಕೆ ಹಾಕಿದ್ದರಿಂದ ಯಾರೂ ಬಾಯ್ಬಿಟ್ಟಿರಲಿಲ್ಲ” ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

“ಆರೋಪಿ ರಸ್ತೆಯಲ್ಲಿ ಓಡಾಡುವಾಗ ಮಹಿಳೆಯರ ಜತೆಗೆ ದುರ್ವರ್ತನೆ ತೋರುತ್ತಿದ್ದ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗುತ್ತಿದ್ದ. ಅದನ್ನು ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ” ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X