ಬೆಂಗಳೂರು | ಕಾರು ತೊಳೆಯಲು ಕಾವೇರಿ ನೀರು ಬಳಕೆ; ಮೂವರಿಗೆ ತಲಾ ₹5,000 ದಂಡ

Date:

ಕಾರನ್ನು ತೊಳೆಯಲು ಕಾವೇರಿ ನೀರನ್ನು ಬಳಸಿದ ಮೂವರಿಗೆ ಜಲಮಂಡಳಿಯ ಅಧಿಕಾರಿಗಳು ತಲಾ ₹5,000 ದಂಡ ವಿಧಿಸಿರುವ ಸಂಗರಿ ಬೆಳಕಿಗೆ ಬಂದಿದೆ.

ಸದಾಶಿವನಗರದಲ್ಲಿ ಕಾವೇರಿ ನೀರಿನಿಂದ ಕಾರನ್ನು ತೊಳೆಯುತ್ತಿದ್ದ ಮಹಿಳೆಯೊಬ್ಬರಿಗೆ ₹5,000 ದಂಡ ವಿಧಿಸಿರುವ ಜಲಮಂಡಳಿ ಸ್ಥಳದಲ್ಲೇ ದಂಡವನ್ನು ಕಟ್ಟಿಸಿಕೊಂಡಿದೆ. ಇದೇ ರೀತಿ ಮಹದೇವಪುರ ಮತ್ತು ಡಾಲರ್ಸ್ ಕಾಲೋನಿಯಲ್ಲೂ ಇಬ್ಬರಿಗೆ ದಂಡ ವಿಧಿಸಿರುವುದಾಗಿ ಜಲಮಂಡಳಿ ತಿಳಿಸಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನೀರಿಲ್ಲದೆ ಪರಿತಪಿಸುತ್ತಿರುವಾಗ ವಾಹನಗಳನ್ನು ತೊಳೆಯಲು ಕಾವೇರಿ ನೀರು ಬಳಸಿ ವ್ಯರ್ಥ ಮಾಡಬೇಡಿ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪರಿಪರಿಯಾಗಿ ಬೇಡಿಕೊಂಡಿತ್ತು. ಜತೆಗೆ ನೀರನ್ನು ಪೋಲು ಮಾಡಿದರೆ ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿತ್ತು. ಆದರೆ ನೀರಿನ ಮಹತ್ವವನ್ನು ಅರಿಯದವರು ತಮ್ಮ ವಾಹನಗಳನ್ನು ಸ್ವಚ್ಚಗೊಳಿಸಲು ಕಾವೇರಿ ನೀರನ್ನು ಬಳಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು; ತ್ವರಿತವಾಗಿ ಕಾಮಗಾರಿ ಮುಗಿಸಿದ ಜಲಮಂಡಳಿ

ನೀರಿನ ಸದ್ಬಳಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ. ಜಲಮಂಡಳಿ ನೀರನ್ನು ಕಾರು ತೊಳೆಯುವುದು, ಕೈತೋಟ, ಮನರಂಜನೆಗಾಗಿ, ಕಾರಂಜಿ ನಿರ್ಮಾಣ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಸಿನಿಮಾ ಹಾಗೂ ಮಾಲ್‌ಗಳಲ್ಲಿ ಕುಡಿಯುವ ನೀರಿನ ಹೊರತುಪಡಿಸಿ ಇನ್ನಿತರ ಬಳಕೆಗೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಒಂದು ವೇಳೆ ಯಾರಾದರೂ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಕಂಡರೆ 1916 ನಂಬರಿಗೆ ಕರೆ ಮಾಡುವಂತೆಯೂ ಜಲ ಮಂಡಳಿ ಕೇಳಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು : ರೈತ ಸಂಘ ಪ್ರತಿಭಟನೆ

ಕಬ್ಬು ಪೂರೈಸಿದ ರೈತರಿಗೆ ಆರೇಳು ತಿಂಗಳಾದರೂ ಕಬ್ಬಿನ ಬಿಲ್‌ ಪಾವತಿಸದ ಸಕ್ಕರೆ...

ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ಗುಬ್ಬಿ | ಜೂನ್ 16 ರಂದು ಕಸಾಪ ಆಜೀವ ಸದಸ್ಯರ ಸಭೆ : ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ...

ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ...

Download Eedina App Android / iOS

X