ಬೆಂಗಳೂರು | ನಾಲ್ಕು ತಿಂಗಳು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂ ಕ್ಷನ್ ಫ್ಲೈಓವರ್ ಬಂದ್!

Date:

Advertisements

ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಅನ್ನು ಬಂದ್ ಮಾಡಲಾಗುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈಓವರ್ (ಮಡಿವಾಳ ಬದಿ) ಇಂದಿನಿಂದ ನಾಲ್ಕು ತಿಂಗಳವರೆಗೆ ಭಾಗಶಃ ಬಂದ್ ಆಗಿರಲಿದೆ.

ಸಿಲ್ಕ್‌ ಬೋರ್ಡ್‌ ಫ್ಲೈಓವರ್‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಮೆಟ್ರೋ ಕಾಮಗಾರಿಗಳು ಆರಂಭವಾಗಿವೆ. ಈ ಕಾಮಗಾರಿಯನ್ನು ಆದಷ್ಟು ಬೇಗನೇ ಮುಗಿಸಬೇಕಿರುವ ಒತ್ತಡ ಬಿಎಂಆರ್‌ಸಿಎಲ್‌ ಮೇಲಿದೆ. ಈ ಹಿನ್ನೆಲೆಯಲ್ಲಿ ಸಿಲ್ಕ್‌ ಬೋರ್ಡ್‌ ಫ್ಲೈಓವರ್‌ ಅನ್ನು ಕೆಲ ತಿಂಗಳ ಕಾಲ ಮುಚ್ಚಲೇಬೇಕಿರುವ ಅನಿವಾರ್ಯತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ತಿಂಗಳವರೆಗೆ ಬಂದ್ ಮಾಡಿ ಕಾಮಗಾರಿ ಮುಗಿಸಲು ಬಿಎಂಆರ್​ಸಿಎಲ್ ಯೋಜಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್ ಮೇಲ್ಸೇತುವೆ ಅಪ್‌ & ಡೌನ್‌ ರ್‍ಯಾಂಪ್ ಕ್ಯಾರೇಜ್‌ ವೇ(ಮಡಿವಾಳ ಬದಿ) ಲೂಪ್‌ಗಳು ಮತ್ತು ರ್‍ಯಾಂಪ್ ಫ್ಲೈಓವರ್‌ ಸ್ಟ್ರೇಜಿಂಗ್‌ ಕಾಮಗಾರಿ ಕೈಗೊಳ್ಳಲು ತಾತ್ಕಾಲಿಕವಾಗಿ ದಿನಾಂಕ 21-10- 2023ರಿಂದ ನಾಲ್ಕು ತಿಂಗಳವರೆಗೂ ಎರಡು ಕ್ಯಾರೇಜ್‌ ಮಾರ್ಗಗಳಲ್ಲಿ 2.50 ಮೀಟರ್‌ ಭಾಗಶಃ ಬ್ಯಾರಿಕೇಡ್‌ ಹಾಕಲಾಗುವುದು. ಸಾರ್ವಜನಿಕರು ಸಹಕರಿಸಬೇಕು. ಇದರಿಂದಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ತಿಳಿಸಿದೆ.

Advertisements

ಬೆಂಗಳೂರು | ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದು; ನಿತ್ಯ 7 ಲಕ್ಷ ಪ್ರಯಾಣಿಕರ ಓಡಾಟ

ಈಗಾಗಲೇ ಟ್ರಾಫಿಕ್ ಜಾಮ್‌ನಿಂದಾಗಿ ಸುದ್ದಿಯಾಗುತ್ತಿರುವ ಈ ಫ್ಲೈ ಓವರ್, ಮೆಟ್ರೋ ಕಾಮಗಾರಿಯಿಂದಾಗಿ ನಾಲ್ಕು ತಿಂಗಳು ಈ ಪ್ರದೇಶದ ನಾಗರಿಕರು ಇನ್ನಷ್ಟು ಟ್ರಾಫಿಕ್ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ.

ನಮ್ಮ ಮೆಟ್ರೋದ ನೀಲಿ ಮಾರ್ಗವು ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X