ಬೆಂಗಳೂರು | ಫುಟ್‌ಪಾತ್‌ನಲ್ಲಿದ್ದ ಅಂಗಡಿಗಳ ತೆರವು; ಬೀದಿ ಬದಿ ವ್ಯಾಪಾರಿಗಳ ಆಕ್ರಂದನ

Date:

Advertisements

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಬಿಬಿಎಂಪಿ ಬುಲ್ಡೋಜರ್‌ಗಳು ಮತ್ತೆ ಸದ್ದು ಮಾಡುತ್ತಿವೆ. ಜಯನಗರದಲ್ಲಿ ಫುಟ್‌ಪಾತ್‌ನಲ್ಲಿ ಬಟ್ಟೆ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಪರಿಣಾಮ, ಬೀದಿ ಬದಿ ವ್ಯಾಪಾರಿಗಳು ಬೀದಿ ಪಾಲಾಗಿದ್ದು, ಭವಿಷ್ಯದ ಕುರಿತು ಕಂಗಾಲಾಗಿದ್ದಾರೆ.

ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ವೇಳೆ, ಬಿಬಿಎಂಪಿ ಅಧಿಕಾರಿಗಳ ವಿರುದ್ದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಗಡಿ ತರವಿನಿಂದ ಕಂಗಾಲಾಗಿರುವ ವ್ಯಾಪಾರಿಯೊಬ್ಬರು, “ನಾನೊಬ್ಬ ಅಂಗವಿಕಲ. ಗಂಧದ ಕಟ್ಟಿ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದೆ. ಆದರೆ, ಇವತ್ತು ನನ್ನ ಅಂಗಡಿಯನ್ನ ತೆರವು ಮಾಡಿದ್ದಾರೆ. ಮುಂದೆ ನನ್ನ ಜೀವನದ ಗತಿ ಏನು. ಏನು ಮಾಡಬೇಕೆಂಬುದೇ ತೋಚುತ್ತಿಲ್ಲ” ಎಂದು ಅಳಲು ತೋಡಿಸಿದ್ದಾರೆ.

Advertisements

“ಫುಟ್‌ಪಾತ್‌ನಲ್ಲಿ ಹಲವಾರು ವ್ಯಾಪಾರಿಗಳು ಅಕ್ರಮವಾಗಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಅವರನ್ನು ತೆರವುಗೊಳಿಸಲು ಈ ಹಿಂದೆಯೇ ತಿಳಿಸಲಾಗಿತ್ತು. ಮೂರು ತಿಂಗಳ ಹಿಂದೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಇದೀಗ, ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗಿದೆ” ಎಂದು ಅಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಮುಖ ರಾಜಕಾಲುವೆಗಳು ಸೇರಿದಂತೆ ಸರ್ಕಾರಿ ಭೂಮಿಯನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಅವುಗಳನ್ನು ತೆರವುಗೊಳಿಸುವಂತೆ ನಗರವಾಸಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ಉಳ್ಳವರ ಮನೆಯ ಕಾಂಪೌಂಡ್‌ ದಾಟದ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳ ಬೆನ್ನತ್ತಿದ್ದಾರೆಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. Off late it had become a nightmare to go to Jayanagar shopping complex. Hawkers had taken over all the pathways, footpaths in and around the shopping complex and there was hardly any space for the shoppers to move around. Also quite a few these hawkers are extremely rude and have rowdy like behavior and at tge end of tge day, leave tge place dirty. It’s a step in the right direction and hope BBMP clears such encroachment and make city clean.

  2. Off late it had become a nightmare to go to Jayanagar shopping complex. Hawkers had taken over all the pathways, footpaths in and around the shopping complex and there was hardly any space for the shoppers to move around. Also quite a few these hawkers are extremely rude and have rowdy like behavior and at the end of the day, leave the place dirty. It’s a step in the right direction and hope BBMP clears such encroachment and make city clean.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X