ಬೆಂಗಳೂರು | ಫೆಂಗಲ್ ಚಂಡಮಾರುತ; ಹಲವೆಡೆ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ

Date:

Advertisements

ಬಂಗಾಳಕೊಲ್ಲಿಯಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರಿನ ಹವಾಮಾನದ ಮೆಲೆಯೂ ಪ್ರಭಾವ ಬೀರಿದೆ. ಡಿಸೆಂಬರ್ 1ರ ಬೆಳ್ಳಂಬೆಳಿಗ್ಗೆ ತಾಪಮಾನ ಕುಸಿದಿದ್ದು, 20 ಡಿಗ್ರಿ ಸೆಲ್ಸಿಯಸ್‌ಗೂ ಕೆಳಕ್ಕೆ ಕುಸಿಯುವ ಸಾಧ್ಯತೆ ಕಂಡುಬಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

“ಕೆಲವೆಡೆ ಮುಂಜಾನೆ ಮಂಜು ಮತ್ತು ಚಳಿ ಅನುಭವಕ್ಕೆ ಬಂದರೆ, ಬೆಂಗಳೂರು ನಗರದಲ್ಲಿ ಮಳೆಯ ತುಂತುರು ಹನಿ ಸುರಿಯುತ್ತಿತ್ತು. ಈಗಾಗಲೇ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳ ಅವಧಿಯಲ್ಲಿ ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪೆಂಗಲ್ ಚಂಡಮಾರುತ ಪರಿಣಾಮ ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿಯಿಂದಲೇ ಮಳೆ ಸುರಿದಿದ್ದು, ಇಂದಿರಾನಗರ, ಹಲಸೂರು, ಎಂಜಿ ರಸ್ತೆ, ರಿಚಂಡ್ ರಸ್ತೆ, ಶಾಂತಿನಗರ, ಲಾಲ್‌ಬಾಗ್, ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತಲ ಬಡಾವಣೆಗಳಲ್ಲಿ ಮಳೆ ಸುರಿದಿದೆ. ಭಾನುವಾರ ಮುಂಜಾನೆಯಲ್ಲೂ ಮಳೆ ಮುಂದುವರೆದಿದ್ದು, ತಾಪಮಾನ ಕುಸಿದಿದೆ. ಚಳಿ ಹೆಚ್ಚಳವಾಗಿದೆ. ಡಿಸೆಂಬರ್ 2ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಿಬಿಎಂಪಿ ಅಧಿಕಾರಿಗಳ ರಜೆ ರದ್ದುಗೊಳಿಸಿರುವ ಆಡಳಿತ, ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸೂಚಿಸಿದೆ.

Advertisements

ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.

“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ

“ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಫೆಂಗಲ್ ಚಂಡಮಾರುತದಿಂದ ಉಂಟಾದ ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು 16 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ, ಐದು ಅಂತಾರಾಷ್ಟ್ರೀಯ ವಿಮಾನಗಳು ಸೇರಿ 16 ವಿಮಾನಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಕೆಐಎ) ಕಳುಹಿಸಲಾಗಿದೆ. ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X