ಬೆಂಗಳೂರು | ಎಚ್ ಎಸ್ ದೊರೆಸ್ವಾಮಿ ಪ್ರತಿಷ್ಠಾನ ಸ್ಥಾಪಿಸಲು ಅಭಿಮಾನಿ-ಅನುಯಾಯಿಗಳ ತೀರ್ಮಾನ

Date:

Advertisements

ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿಯವರ ನೆನಪನ್ನು ಮುಂದಿನ ಪೀಳಿಗೆಗಳಿಗಾಗಿ ಉಳಿಸಿಕೊಳ್ಳುತ್ತ, ಅವರ ಕಾಳಜಿಗಳನ್ನೂ ಹೋರಾಟಗಳನ್ನೂ ಮುಂದಕ್ಕೆ ಸಾಗಿಸುವ ಉದ್ದೇಶದಿಂದ ʼಎಚ್.ಎಸ್. ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನʼ ಎಂಬ ಸಂಸ್ಥೆ ಸ್ಥಾಪಿಸಲು ದೊರೆಸ್ವಾಮಿಯವರ ಅಭಿಮಾನಿಗಳು-ಅನುಯಾಯಿಗಳು ನಿರ್ಧರಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸೌಹಾರ್ದ-ಸಹಬಾಳ್ವೆ, ಅಂತ್ಯೋದಯ-ಸರ್ವೋದಯ, ಪರಿಸರ ಸಂರಕ್ಷಣೆ, ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆ, ಕೋಮುವಾದ-ಬಂಡವಾಳವಾದ-ಫ್ಯಾಸಿಸಂಗೆ ವಿರೋಧ ಮುಂತಾಗಿ ದೊರೆಸ್ವಾಮಿಯವರು ದಣಿವರಿಯದೆ ಹೋರಾಟ ನಡೆಸಿದ್ದಾರೆ. ಈ ವಿಚಾರಗಳನ್ನು, ಅಂತೆಯೇ ಸ್ವಾತಂತ್ರ್ಯ ಚಳವಳಿಯ ನೈಜ ಇತಿಹಾಸವನ್ನು ಶಾಲಾ-ಕಾಲೇಜುಗಳ ಮೂಲಕ ಯುವಜನತೆಗೆ ಪರಿಚಯಿಸಬೇಕೆಂದು ಕೂಡ ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾದವು.

ದೊರೆಸ್ವಾಮಿ

ಬೆಂಗಳೂರಿನ ಯಾವುದಾದರೊಂದು ಪ್ರಮುಖ ರಸ್ತೆ ಅಥವಾ ಮೆಟ್ರೊ ನಿಲ್ದಾಣಕ್ಕೆ ದೊರೆಸ್ವಾಮಿಯವರ ಹೆಸರಿಡಬೇಕು, ಸ್ವಾತಂತ್ರ್ಯ ಉದ್ಯಾನದಲ್ಲಿ ಅವರ ಹೆಸರಿನಲ್ಲಿ ವಿವಿಧೋದ್ದೇಶ ಕೇಂದ್ರವನ್ನು ಸ್ಥಾಪಿಸಬೇಕು, ಬೆಂಗಳೂರು ವಿ.ವಿ. ಗಾಂಧಿ ಅಧ್ಯಯನ ಕೇಂದ್ರದಲ್ಲಿ ಅವರ ಹೆಸರಲ್ಲಿ ದತ್ತಿ ಸ್ಥಾಪಿಸಬೇಕು, ಅವರ ಬರಹ-ಭಾಷಣಗಳನ್ನು ಪುಸ್ತಕಗಳಾಗಿ ಪ್ರಕಟಿಸುವ ಕೆಲಸ ಮಾಡಬೇಕು ಎಂದು ಸಭೆ ಸರ್ಕಾರವನ್ನು ಆಗ್ರಹಿಸಿತು. ಇದಕ್ಕಾಗಿ ಗಣ್ಯರ ನಿಯೋಗವೊಂದು ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಅವರಿಗೆ ಮನವರಿಕೆ ಮಾಡಬೇಕು ಎಂದು ನಿರ್ಣಯಿಸಲಾಯಿತು.

Advertisements

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

ಸಭೆಯಲ್ಲಿ ಹಿರಿಯ ಮಹಿಳಾ ಹೋರಾಟಗಾರ್ತಿಯರಾದ ಡಾ.ವಿಜಯಮ್ಮ, ಇಂದಿರಾ ಕೃಷ್ಣಪ್ಪ, ರೈತ ಚಳವಳಿಯ ವೀರಸಂಗಯ್ಯ ಮತ್ತು ಸಿದ್ದಗೌಡ ಮೋದಗಿ, ಗೊರೂರು ರಾಮಸ್ವಾಮಿಯವರ ಮಗಳು ಡಾ. ವಸಂತಿ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಲ್ಲದೆ ರಾಜ್ಯಾದ್ಯಂತ ಹಲವಾರು ಗಣ್ಯರು, ಹೋರಾಟಗಾರರು ಈ ಕಾರ್ಯದಲ್ಲಿ ತಾವುಗಳೂ ಏನಾದರೊಂದು ಜವಾಬ್ದಾರಿ ನಿರ್ವಹಿಸುವ ಇಚ್ಛೆ ವ್ಯಕ್ತಪಡಿಸಿ ಸಂದೇಶಗಳನ್ನು ಕಳಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X