ಬೆಂಗಳೂರು | ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ; ಸಾವು

Date:

Advertisements

ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ಮಾಡಿ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರಿನ ದೊಡ್ಡಬಾಣಸವಾಡಿಯಲ್ಲಿ ನಡೆದಿದೆ.

ಅಂಜಿನಪ್ಪ ಮೃತ ವ್ಯಕ್ತಿ. ಚಾಲಕ ಸುಭಾಷ್ (30) ಶಾಲಾ ಬಸ್‌ ಚಲಾಯಿಸುತ್ತಿದ್ದ ವ್ಯಕ್ತಿ. ಅಕ್ಟೋಬರ್‌ 10ರಂದು ಶಾಲಾ ಬಸ್ ಚಾಲಕ ಕುಡಿದು 25 ಶಾಲಾ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ದೊಡ್ಡಬಾಣಸವಾಡಿ ಬಳಿ ತೆರಳುತ್ತಿದ್ದರು. ಈ ವೇಳೆ, ಬಾಣಸವಾಡಿ ಬಳಿ ಮೆಡಿಕಲ್‌ ಶಾಪ್‌ನಿಂದ ಮನೆಗೆ ತೆರಳುತ್ತಿದ್ದ ಅಂಜಿನಪ್ಪ ಅವರಿಗೆ ಗುದ್ದಿದ್ದಾನೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಂಜಿನಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಅಕ್ಟೋಬರ್ 11 ರಂದು ಮೃತಪಟ್ಟಿದ್ದಾರೆ.

Advertisements

ಈ ಅಪಘಾತ ನಡೆಸುವುದಕ್ಕೂ ಮೊದಲು ಶಾಲಾ ಬಸ್‌ ಚಾಲಕ ಓರ್ವ ಮಹಿಳೆಗೆ ಬಸ್‌ ಗುದ್ದಿ ಬಂದಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ

ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಚಾಲಕ ಸುಭಾಷ್​​ನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X