ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ಐಟಿ ದಾಳಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೆ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ, ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿಯ ಸಮಯದಲ್ಲಿ ಪತ್ತೆಯಾದ ಹಲವಾರು ದಾಖಲಾತಿಗಳ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ತೆರಿಗೆ ವಂಚನೆ ಆರೋಪದಡಿ ಅಕ್ಟೋಬರ್ 10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ನಾನಾ ಖಾತೆಗಳು ಪತ್ತೆಯಾಗಿದ್ದವು. ಅಲ್ಲದೆ ಮಾಲೀಕರ ಮನೆಯಿಂದ ₹1.47 ಕೋಟಿ ನಗದು ಸಿಕ್ಕಿತ್ತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ​​ಮನೀಶ್ ಮೌದ್ಗಿಲ್ ನೇಮಕ

ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಗುರುವಾರ ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X