ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

Date:

Advertisements

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ ಉಳಿದಿದೆ. ಸದ್ಯ, ಎಕ್ಸ್‌ಪ್ರೆಸ್‌-ವೇ ಉದ್ಘಾಟನೆಗೊಂಡು ವರ್ಷ ಕಳೆದಿದೆ. ಆದರೆ, ಈಗಾಗಲೇ ದುಪ್ಪಟ್ಟು ಟೋಲ್ ಶುಲ್ಕ ಮತ್ತು ಎರಡು ಬಾರಿ ಶುಲ್ಕ ಹೆಚ್ಚಳದಿಂದ ಜನಾಕ್ರೋಶಕ್ಕೆ ಕಾರಣವಾಗಿತ್ತು. ಇದೀಗ, ಮತ್ತೆ ಟೋಲ್ ಶುಲ್ಕ ಹೆಚ್ಚಳವಾಗುತ್ತಿದ್ದು, ಮತ್ತೊಮ್ಮೆ ಜನಕ್ರೋಶಕ್ಕೆ ತುತ್ತಾಗುತ್ತಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಐಎನ್‌ಎಚ್‌ಎ) ಶುಲ್ಕವನ್ನು ಹೆಚ್ಚಿಸಿದೆ. ಸಗಟು ಬೆಲೆ ಸೂಚ್ಯಂಕದ ಪ್ರಕಾರ, ಟೋಲ್ ಶುಲ್ಕವನ್ನು 3% ಹೆಚ್ಚಿಸಲಾಗಿದೆ. ಪರಿಷ್ಕೃತ ಶುಲ್ಕವು 2024ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಈ ಹಿಂದೆ 2023ರ ಏಪ್ರಿಲ್‌ನಲ್ಲಿ ಮೊದಲ ಬಾರಿಗೆ ಶುಲ್ಕ ಹೆಚ್ಚಿಸಲಾಗಿತ್ತು. ಟೋಲ್ ದರ ಹೆಚ್ಚಳದ ವಿರುದ್ಧ ವಾಹನ ಸವಾರರು ಕಿಡಿಕಾರಿದ್ದರು. ಆದರೂ, ಜೂನ್‌ನಲ್ಲಿ ಮತ್ತೆ 22% ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ, ಹೊಸ ಆರ್ಥಿಕ ವ‍ರ್ಷಕ್ಕೆ ಮತ್ತೊಮ್ಮೆ ಶುಲ್ಕ ಹೆಚ್ಚಳ ಮಾಡಲಾಗಿದೆ.

Advertisements

ಹೊಸ ದರದಂತೆ ಬೆಂಗಳೂರು-ನಿಡಘಟ್ಟ ನಡುವಿನ ಎಕ್ಸ್‌ಪ್ರೆಸ್‌-ವೇ ಬಳಕೆಗೆ ಕಾರುಗಳು/ವ್ಯಾನ್‌ಗಳು/ಜೀಪ್‌ಗಳ ಸವಾರರು ಏಕಮುಖ ಪ್ರಯಾಣಕ್ಕೆ 170 ರೂ. ಮತ್ತು 24 ಗಂಟೆಗಳ ಒಳಗೆ ಹಿಂದಿರುಗುವ ದ್ವಿಮುಖ ಪ್ರಯಾಣಕ್ಕೆ 255 ನಿಗದಿಯಾಗಿದೆ. ಶುಲ್ಕ ಪರಿಷ್ಕರಣೆಗೂ ಮುನ್ನ ಟೋಲ್‌ ದರವು ಏಕಮುಖ ಪ್ರಯಾಣಕ್ಕೆ 165 ರೂ. ಮತ್ತು ದ್ವಿಮುಖ ಪ್ರಯಾಣಕ್ಕೆ 250 ರೂ. ಇತ್ತು.

ಇನ್ನು, ಲಘು ವಾಣಿಜ್ಯ ವಾಹನಗಳು, ಸರಕು ವಾಹನಗಳು ಹಾಗೂ ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣ 275 ರೂ.ಮತ್ತು ದ್ವಿಮುಖ ಪ್ರಯಾಣ 425 ನಿಗದಿಯಾಗಿದೆ. ಇದು 270 ರೂ. ಮತ್ತು 405 ರೂ. ಇತ್ತು.

ಭಾರೀ ಟ್ರಕ್‌ಗಳು ಮತ್ತು ಬಸ್‌ಗಳಿಗೆ ಏಕಮುಖ ಪ್ರಯಾಣ 580 ರೂ. ಮತ್ತು ದ್ವಿಮುಖ ಪ್ರಯಾಣ 870 ರೂ. ನಿಗದಿಯಾಗಿದೆ.

ಅದೇ ರೀತಿ ನಿಡಘಟ್ಟ ಮತ್ತು ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಬಳಕೆಗೆ ಕಾರುಗಳು/ವ್ಯಾನ್‌ಗಳು/ಜೀಪ್‌ಗಳಿಗೆ ಏಕಮುಖ ಪ್ರಯಾಣ 160 ರೂ. ಮತ್ತು ದ್ವಿಮುಖ ಪ್ರಯಾಣ 240 ರೂ. ನಿಗದಿಯಾಗಿದೆ.

ಒಟ್ಟಾರೆಯಾಗಿ ಬೆಂಗಳೂರು-ಮೈಸೂರು ನಡುವಿನ ಏಕಮುಖ ಪ್ರಯಾಣಕ್ಕೆ ಕಾರುಗಳು 330 ರೂ. ಭರಿಸಬೇಕಾಗಿದೆ.

ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (ಎಸ್‌ಟಿಆರ್‌ಆರ್‌)

ಎಕ್ಸ್‌ಪ್ರೆಸ್‌ ವೇ ಮಾತ್ರವಲ್ಲದೆ, ಬೆಂಗಳೂರಿನ ‘ಸ್ಯಾಟಲೈಟ್ ಟೌನ್ ರಿಂಗ್ ರೋಡ್’ನ ಟೋಲ್‌ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಈ ರಸ್ತೆಯ ದೊಡ್ಡಬಳ್ಳಾಪುರ-ಹೊಸಕೋಟೆ ನಡುವಿನ 39.6-ಕಿಮೀ ಪ್ರಯಾಣಕ್ಕೆ ಆರು ತಿಂಗಳ ಹಿಂದೆಯಷ್ಟೇ ಟೋಲ್‌ ಶುಲ್ಕ ನಿಗದಿ ಮಾಡಲಾಗಿತ್ತು. ಇದೀಗ, ಮತ್ತೆ ಶುಲ್ಕವನ್ನು ಹೆಚ್ಚಿಸಲಾಗಿದೆ.

ಈ ರಸ್ತೆಯಲ್ಲಿ ಕಾರುಗಳು/ವ್ಯಾನ್‌ಗಳು/ಜೀಪ್‌ಗಳಿಗೆ ಏಕಮುಖ ಪ್ರಯಾಣ 80 ರೂ. ಮತ್ತು ದ್ವಿಮುಖ ಪ್ರಯಾಣಕ್ಕೆ 120 ರೂ., ಲಘು ವಾಣಿಜ್ಯ ವಾಹನಗಳು, ಸರಕು ವಾಹನಗಳು ಮತ್ತು ಮಿನಿಬಸ್‌ಗಳಿಗೆ ಏಕಮುಖ ಪ್ರಯಾಣ 130 ರೂ. ದ್ವಿಮುಖ ಪ್ರಯಾಣ 200 ರೂ., ಹಾಗೂ ಭಾರೀ ವಾಹನಗಳಿಗೆ ಏಕಮುಖ 275 ರೂ. ಮತ್ತು ದ್ವಿಮುಖ ಪ್ರಯಾಣ 415 ರೂ. ನಿಗದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X