ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ; ಸ್ಪೀಡ್‌ ಲಿಮಿಟ್‌ ಜಾರಿ

Date:

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 117 ಕಿ.ಮೀ ಉದ್ದದ ಮಾರ್ಗದಲ್ಲಿ ಸ್ಪೀಡ್ ಲಿಮಿಟ್‌ಗಳನ್ನು ಜಾರಿ ಮಾಡಲಾಗಿದ್ದು, ಅತಿ ವೇಗದ ವಾಹನ ಸವಾರರಿಗೆ ದಂಡ ವಿಧಿಸುವುದು ಸೇರಿದಂತೆ ಹಲವು ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

- Advertisement -

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು ರಾಮನಗರ ಮತ್ತು ಮಂಡ್ಯದ ಪೊಲೀಸ್‌ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದು, ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚೆಗೆ ಹೆಚ್ಚು ಮಾರಣಾಂತಿಕ ಅಪಘಾತಗಳು ವರದಿಯಾಗಿರುವ ಕುರಿತು ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅತಿಯಾದ ವೇಗ ಮತ್ತು ಅಜಾಗರೂಕ ಚಾಲನೆ ದುರಂತ ಸಾವಿಗೆ ಮುಖ್ಯ ಕಾರಣವಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದು, ಅತಿ ವೇಗವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ನಾವು ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳುತ್ತೇವೆ. ಮೊದಲನೆಯದಾಗಿ, ನಾವು ಎರಡೂ ದಿಕ್ಕುಗಳಲ್ಲಿ ಸ್ಪೀಡ್ ಲಿಮಿಟ್‌ ಸ್ಥಾಪಿಸುತ್ತೇವೆ. ರಾಡಾರ್‌ ಗನ್‌ಗಳು ಮುಖ್ಯವಾಗಿ ರಾಮನಗರ ಮತ್ತು ಮಂಡ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗುವುದು. ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸುವ ವಾಹನಗಳ ಚಿತ್ರಗಳನ್ನು ಅವರು ಸೆರೆಹಿಡಿಯುತ್ತಾರೆ. ಅಂತಹ ವಾಹನಗಳನ್ನು ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸಲಾಗುವುದು ಮತ್ತು ಚಾಲಕನಿಗೆ ದಂಡ ವಿಧಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

“ಮುಂದಿನ ಹಂತಗಳಲ್ಲಿ, ʼಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾʼ(ಎಎನ್‌ಪಿಆರ್)ಗಳನ್ನು ಹಲವು ಸ್ಥಳಗಳಲ್ಲಿ ಸ್ಥಾಪಿಸಲಾಗುವುದು. ಇದರಿಂದ ಅತಿ ವೇಗದ ವಾಹನಗಳನ್ನು ಗುರುತಿಸಬಹುದು. ನಾವು ಈ ವಿಷಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು” ಎಂದು ಹೇಳಿದ್ದಾರೆ.

ರಾಮನಗರ ಮತ್ತು ಮಂಡ್ಯ ನಡುವಿನ 18 ಸ್ಥಳಗಳಲ್ಲಿ ಮಾರಣಾಂತಿಕ ಅಪಘಾತಗಳು ಸಂಭವಿಸಿರುವ ಸ್ಥಳಗಳನ್ನು ಪರಿಶೀಲಿಸಿದ್ದು, “ವೇಗದ ಮಿತಿಯನ್ನು ಉಲ್ಲಂಘಿಸಿ 100 ಕಿಮೀಗಿಂತ ಅಧಿಕ ವೇಗದಲ್ಲಿ ವಾಹನ ಚಲಾಯಿಸುವ ಜನರ ಪರವಾನಗಿಗಳನ್ನು ಅಮಾನತುಗೊಳಿಸಲಾಗುವುದು” ಎಂದು ಕುಮಾರ್ ಸುಳಿವು ನೀಡಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...