ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

Date:

Advertisements

ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್‌ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ ಟೋಲ್‌ ಸಂಗ್ರಹವನ್ನು ಆರಂಭವಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮಂಡ್ಯ ಜಿಲ್ಲೆಯ ಗಣಂಗೂರು ಬಳಿ ನಿರ್ಮಾಣವಾಗಿರುವ ಟೋಲ್‌ ಪ್ಲಾಜಾದಲ್ಲಿ ಜುಲೈ 1ರಿಂದ ಸುಂಕ ವಸೂಲಿ ಆರಂಭವಾಗಲಿದೆ.

ಮೊದಲ ಹಂತದಲ್ಲಿ ಬೆಂಗಳೂರು ಮತ್ತು ಮದ್ದೂರು ತಾಲೂಕಿನ ನಿಡಘಟ್ಟವರೆಗೆ ಟೋಲ್‌ ಸಂಗ್ರಹ ಮಾಡಲಾಗುತ್ತಿದೆ. ಇದೀಗ, ಎರಡನೇ ಹಂತದಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ಟೋಲ್‌ ಸಂಗ್ರಹಕ್ಕೆ ಮುಂದಾಗಿದ್ದು, ಶ್ರೀರಂಗಪಟ್ಟಣದ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಶನಿವಾರದಿಂದ ಪ್ರಾರಂಭವಾಗಲಿದೆ ಎಂದು ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಒಂದನೇ ಹಂತದಲ್ಲಿ ಬಿಡದಿ ಬಳಿಕ ಕಣಮಿಣಕಿ ಟೋಲ್‌ನಲ್ಲಿ ಸುಂಕ ವಸೂಲಿ ಮಾಡಲಾಗುತ್ತಿತ್ತು. ಈ ಸುಂಕವು ಬೆಂಗಳೂರಿನಿಂದ ನಿಡಘಟ್ಟದವರೆಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ, ಎರಡನೇ ಹಂತದಲ್ಲಿ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಆರಂಭವಾಗಲಿದೆ. ಇದು ನಿಡಘಟ್ಟದಿಂದ ಮೈಸೂರಿನವರೆಗೆ ಅನ್ವಯವಾಗಲಿದೆ. ಅಂತಯೇ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವವರು ಎರಡು ಕಡೆ ಟೋಲ್‌ ಪಾವತಿ ಮಾಡಬೇಕಾಗಿದೆ.

Advertisements

ಆದರೆ, ನಿಡಘಟ್ಟ ಮತ್ತು ಮೈಸೂರು ನಡುವಿನ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಮುಗಿದಿಲ್ಲ. ಆರು ಪಥದ ರಸ್ತೆಯ ಕಾಮಗಾರಿಯಷ್ಟೇ ಮುಗಿದಿದೆ. ಇನ್ನೂ ಎರಡೂ ಬದಿಯ ನಾಲ್ಕು ಪಥದ ಸರ್ವೀಸ್‌ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ರಸ್ತೆ ಬದಿಯಲ್ಲಿ ಚರಂಡಿಗಳ ನಿರ್ಮಾಣವಾಗಿಲ್ಲ. ಹಲವೆಡೆ ಕೆಳ ಸೇತುವೆಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿಲ್ಲ. ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡಬಾರದು ಎಂದು ಆಗ್ರಹಗಳು ಕೇಳಿಬಂದಿವೆ.

“ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್‌ ವಸೂಲಿ ಆರಂಭಿಸಬಾರದು” ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೂಡ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ, ಟೋಲ್‌ ಸುಂಕ ಆರಂಭಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X