ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ: ಟೋಲ್ ಪ್ಲಾಜಾ ನೌಕರನ ಹತ್ಯೆ

Date:

  • ಕ್ಷುಲ್ಲಕ ವಿಚಾರಕ್ಕೆ ಭಾನುವಾರ ರಾತ್ರಿ ನಡೆದಿದ್ದ ಗಲಾಟೆ
  • ಟೋಲ್‌ ಶುಲ್ಕ ಪಾವತಿಯಲ್ಲಿ ವಿಳಂಬವಾದ ವಿಚಾರಕ್ಕೆ ಜಗಳ

ಟೋಲ್ ಶುಲ್ಕ ಪಾವತಿ ವೇಳೆ ವಿಳಂಬವಾದ ಕಾರಣಕ್ಕೆ ಗಲಾಟೆ ನಡೆದು ಟೋಲ್‌ ಪ್ಲಾಜಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇಯಲ್ಲಿರುವ ಶೇಷಗಿರಿ ಟೋಲ್‌ ಪ್ಲಾಜಾ ಬಳಿಕ ನಡೆದಿದೆ.

- Advertisement -

ಭಾನುವಾರ ರಾತ್ರಿ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್‌ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೈಸೂರಿನಿಂದ ಬೆಂಗಳೂರಿಗೆ ಯುವಕರ ಗುಂಪೊಂದು ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಷೇಶಗಿರಿ ಟೋಲ್‌ನಲ್ಲಿ ಯುವಕ ಕಾರು ಬಂದ ಪಥದಲ್ಲಿಯೇ ಆಟೋವೊಂದು ಟೋಲ್‌ ಪಾವತಿಸುತ್ತಿತ್ತು. ಆಟೋದಲ್ಲಿ ಫಾಸ್ಟಾಗ್‌ ಇಲ್ಲದಿದ್ದ ಕಾರಣ, ಎರಡು ಪಟ್ಟು ಹಣ ಪಾವತಿ ಮಾಡಬೇಕಿತ್ತು. ಆಟೋ ಚಾಲಕ ಟೋಲ್‌ ಶುಲ್ಕ ಕಟ್ಟುವುದು ತಡವಾಗಿದೆ.

ಹೀಗಾಗಿ, ಆಟೋ ಮುಂದೆ ಹೋದ ಬಳಿಕ ಟೋಲ್‌ ಬೂತ್‌ ಬಳಿ ಬಂದ ಕಾರಿನ ಯುವಕರು ಸಿಬ್ಬಂದಿ ಪವನ್ ಕುಮಾರ್‌ ಜೊತೆ ಗಲಾಟೆ ಮಾಡಿದ್ದು, ಟೋಲ್‌ ಕಟ್ಟಲು ನಿರಾಕರಿಸಿದ್ದಾರೆ. ಈ ವೇಳೆ, ಯುವಕರು ಮತ್ತು ಟೋಲ್‌ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸಿದ್ದಾರೆ. ಬಳಿಕ, ಸ್ಥಳೀಯರು ಮಧ್ಯ ಪ್ರವೇಶಿಸಿ ಎಲ್ಲರನ್ನೂ ಸ್ಥಳದಿಂದ ಕಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಆದರೆ, ಅಲ್ಲಿಂದ ಸ್ವಲ್ಪವೇ ದೂರ ಹೋಗಿದ್ದ ಯುವಕರ ಗುಂಪು ಪವನ್ ಬರುವಿಕೆಗಾಗಿ ಕಾದು ಕುಳಿತಿದೆ. ರಾತ್ರಿ 12 ಗಂಟೆ ಸುಮಾರಿಗೆ ಬಿಡುವು ಪಡೆದು ಟೂಲ್‌ಬೂತ್‌ನಿಂದ ಪವನ್ ಹೊರಬಂದಿದ್ದಾರೆ. ಆತನ ಮೇಲೆ ದುಷ್ಕರ್ಮಿ ಯುವಕರು ಹಲ್ಲೆ ಮಾಡಿದ್ದಾರೆ. ಪವನ್, ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...