ಬೆಂಗಳೂರು | ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿ ಪಿಯು ಕಾಲೇಜು ಪ್ರಾಂಶುಪಾಲರ ನೇಮಕ 

Date:

Advertisements

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇದೇ ಮೊದಲ ಬಾರಿಗೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಬಾಲ್ಯ ವಿವಾಹ ನಿಷೇಧ ಅಧಿಕಾರಿ(ಸಿಎಂಪಿಒ)ಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಕಂದಾಯ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ರಕ್ಷಣಾಧಿಕಾರಿ, ತಹಶೀಲ್ದಾರ್, ಪಂಚಾಯತ್ ಸದಸ್ಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಈ ಹಿಂದೆ ಸಿಎಂಪಿಒಗಳಾಗಿ ಸರ್ಕಾರ ನೇಮಿಸಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನ ಕಾರ್ಯದರ್ಶಿ ಫೆಬ್ರವರಿ 4ರಂದು ಹೊರಡಿಸಿರುವ ಆದೇಶದಲ್ಲಿ ಪಿಯು ಕಾಲೇಜು ಪ್ರಾಂಶುಪಾಲರು, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಮಕ್ಕಳ ಸಹಾಯವಾಣಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜಿಲ್ಲಾ ಸಂಯೋಜಕರನ್ನು ಸೇರಿಸಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

Advertisements

ಬಾಲ್ಯ ವಿವಾಹ ನಿಷೇಧ ಕಾಯ್ದೆಯ(ಸಿಎಂಪಿಎ) ನಿಬಂಧನೆಗಳು ಮತ್ತು ಬಾಲ್ಯ ವಿವಾಹದ ಹಾನಿಕಾರಕ ಪರಿಣಾಮಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸಂವೇದನಾಶೀಲಗೊಳಿಸುವುದು ಸಿಎಂಪಿಒ ಕರ್ತವ್ಯವಾಗಿತ್ತು. ಅವರು ಪ್ರಾಥಮಿಕವಾಗಿ ಬಾಲ್ಯ ವಿವಾಹಗಳನ್ನು ತಡೆಯಬೇಕೆಂದು ಈ ಹಿಂದೆ ಆದೇಶ ಮಾಡಿತ್ತು.

ರಾಜ್ಯದಲ್ಲಿ 30,000ಕ್ಕೂ ಹೆಚ್ಚು ಸಿಎಂಪಿಒಗಳಿದ್ದು, ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಇತರರನ್ನು ಸೇರಿಸುವುದರಿಂದ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುತ್ತದೆಂದು ತಜ್ಞರು ಗಮನಸೆಳೆದಿದ್ದಾರೆ. ಆದರೆ ಈ ಸಿಎಂಪಿಒಗಳಿಗೆ ಕಾಲಕಾಲಕ್ಕೆ ತರಬೇತಿ ನೀಡಲಾಗುವುದಿಲ್ಲ, ಇದು ಉದ್ದೇಶವನ್ನು ಪೂರೈಸದಿರಬಹುದು.

“ಪಿಯು ಪ್ರಾಂಶುಪಾಲರನ್ನು ಸಿಎಂಪಿಒಗಳಾಗಿ ನೇಮಕ ಮಾಡಿರುವುದು ಸಕಾರಾತ್ಮಕ ಕ್ರಮವಾಗಿದೆ. ಆದರೆ ಈ ಅಧಿಕಾರಿಗಳು ಬಾಲ್ಯ ವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರಿಯಾದ ತರಬೇತಿ, ಕಾನೂನು ಬೆಂಬಲ ಮತ್ತು ಪ್ರೇರಣೆಯನ್ನು ಪಡೆಯಬೇಕು. ಸಮರ್ಪಿತ ಸಿಎಂಪಿಒಗಳನ್ನು ನೇಮಿಸುವ ಮಹತ್ವವನ್ನು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. ಮಲ್ಟಿ-ಟಾಸ್ಕಿಂಗ್ ಅಧಿಕಾರಿಗಳು ತಮ್ಮ ಶಾಸನಬದ್ಧ ಕರ್ತವ್ಯಗಳ ಮೇಲೆ ಗಮನ ಹರಿಸಲು ಹೆಣಗಾಡಬಹುದು” ಎಂದು ಮಕ್ಕಳ ಹಕ್ಕುಗಳ ಟ್ರಸ್ಟ್ ನಿರ್ದೇಶಕ ನಾಗಸಿಂಹ ಜಿ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ‘ಜ್ಞಾನ ಕಾವೇರಿ ವಿಶ್ವವಿದ್ಯಾಲಯ’ ಮುಚ್ಚಿದರೆ ಜಿಲ್ಲಾದ್ಯಂತ ಪ್ರತಿಭಟನೆಯ ಎಚ್ಚರಿಕೆ

“ಸಿಎಂಪಿಒಗಳಿಗೆ ಅವರ ಪಾತ್ರಗಳು, ಜವಾಬ್ದಾರಿಗಳು ಮತ್ತು ಬಾಲ್ಯ ವಿವಾಹದ ಸುತ್ತಲಿನ ಕಾನೂನು ಚೌಕಟ್ಟಿನ ಬಗ್ಗೆ ಅರಿವು ಮೂಡಿಸಲು ನಿಯಮಿತ ಕಾರ್ಯಾಗಾರಗಳು ಮತ್ತು ತರಬೇತಿ ಕಾರ್ಯಕ್ರಮಗಳ ಅಗತ್ಯವಿದೆ” ಎಂದು ಹೇಳಿದರು.

“ಸಂಕೀರ್ಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ಪಿಸಿಎಂಎ ಪರಿಣಾಮಕಾರಿ ಜಾರಿಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಲು ಕಾನೂನು ಸಂಪನ್ಮೂಲಗಳು ಹಾಗೂ ಬೆಂಬಲವನ್ನು ಪ್ರವೇಶಿಸುವ ಸಿಎಂಪಿಒಗಳ ಮೇಲೂ ಒತ್ತು ನೀಡಬೇಕು. ಬಾಲ್ಯ ವಿವಾಹಗಳನ್ನು ಯಶಸ್ವಿಯಾಗಿ ತಡೆಗಟ್ಟುವ ಮತ್ತು ದುರ್ಬಲ ಮಕ್ಕಳನ್ನು ಬೆಂಬಲಿಸುವ ಸಿಎಂಪಿಒಗಳಿಗೆ ಮಾನ್ಯತೆ ನೀಡಬೇಕು. ಜತೆಗೆ ಪ್ರೋತ್ಸಾಹಕ್ಕೂ ಸರ್ಕಾರ ಒತ್ತು ನೀಡಬೇಕು” ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X