ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

Date:

  • ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು
  • ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ ಉದ್ಯಾನನಗರಿ ರಸ್ತೆಗಳ ತುಂಬೆಲ್ಲ ನೀರು ನಿಂತಿದೆ. ಇನ್ನೂ ಕೆಲವು ಬಡಾವಣೆಯ ನೂರಾರು ಮನೆಗಳಿಗೆ ಒಳಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಹಿನ್ನೆಲೆ, ಚರಂಡಿಗೆ ಕಟ್ಟಿದ ಗೋಡೆಯನ್ನು ಕೆಡವಲಾಗಿದೆ. ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಮಂಗಳವಾರ ಸುರಿದ ಮಳೆಗೆ ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಇದರಿಂದ ರಾತ್ರಿಯಿಡಿ ಜನರು ನಿದ್ದೆ ಇಲ್ಲದೇ ಗಬ್ಬು ವಾಸನೆಯಲ್ಲಿ ಇಡೀ ರಾತ್ರಿ ಕಳೆಯುವಂತಾಯಿತು.

“ಚರಂಡಿ ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಇದರಿಂದ ಚರಂಡಿ ನೀರು ಮನೆಗಳಿಗೆ ನುಗ್ಗಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಚರಂಡಿ ನೀರಿನಲ್ಲಿ ಮುಳುಗಿ ಹೋಗಿವೆ. ಮನೆಗಳಿಗೆ ನೀರು ನುಗ್ಗಿದರಿಂದ ಜನ ಇಷ್ಟೇಲ್ಲಾ ಕಷ್ಟಗಳನ್ನು ಅನುಭವಿಸುತ್ತಿದ್ದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ದೇವರಚಿಕ್ಕನಹಳ್ಳಿಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮನೆಗೆ ಚರಂಡಿ ನೀರು ನುಗ್ಗಿ ತುಂಬಾ ಅವಾಂತರ ಸೃಷ್ಟಿಯಾಗಿದೆ. ಗಬ್ಬು ವಾಸನೆಯಲ್ಲಿಯೇ ದಿನ ಕಳೆಯುವಂತಾಗಿದೆ. ರಾತ್ರಿಯೆಲ್ಲಾ ಮಳೆಯ ನೀರನ್ನು ಹೊರಹಾಕುವುದೇ ಕೆಲಸವಾಗಿತ್ತು. ಇದೆಲ್ಲಾ ಸಂಪೂರ್ಣವಾಗಿ ಸರಿ ಹೋಗಬೇಕೆಂದರೆ ಇನ್ನೂ ಎರಡು ದಿನ ಬೇಕಾಗುತ್ತಿದೆ. ಚರಂಡಿಗೆ ಮಳೆಗಾಲಕ್ಕೂ ಮುನ್ನವೇ ಮೊದಲೇ ಗೋಡೆ ಕಟ್ಟಿದರೇ ಇಷ್ಟೇಲ್ಲ ಸಮಸ್ಯೆ ಇರುತ್ತಿರಲಿಲ್ಲ” ಎಂದರು.

“ಚರಂಡಿ ನೀರು ನುಗ್ಗಿರುವದರಿಂದ ಮನೆಯಲ್ಲಾ ವಾಸನೆಯಿದೆ. ಮನೆಯಲ್ಲಿ ಮಲಗಿಕೊಳ್ಳುವುದು ಕಷ್ಟಕರವಾಗಿದೆ. ಬೇರೆಯವರ ಮನೆಗೆ ಹೋಗಿ ಮಲಗಿಕೊಳ್ಳುತ್ತಿದ್ದೇವೆ. ನಾವು ಬಾಡಿಗೆ ಮನೆಯಲ್ಲಿರುವವರು ಮನೆ ಖಾಲಿ ಮಾಡಬೇಕೆಂದರೆ ಅವಧಿ ಮುಗಿಯುವವರಿಗೆ ನೀಡಿದ ಡೌನ್ ಪೆಮೇಂಟ್‌ ಕೊಡುವುದಿಲ್ಲ ಎಂದು ಮನೆ ಮಾಲೀಕರು ಹೇಳುತ್ತಾರೆ. ಇತ್ತ ಕಡೆ ಬಿಬಿಎಂಪಿ ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುತ್ತಿಲ್ಲ” ಎಂದು ನೋವು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಅನುಗ್ರಹ ಬಡಾವಣೆ ಜನರ ಗೋಳು

ಅನುಗ್ರಹ ಬಡಾವಣೆಯ ರಸ್ತೆಗಳಲ್ಲಿ ಮಂಡಿಯುದ್ದಕ್ಕೂ ಕೊಳಚೆ ನೀರು ನಿಂತಿತ್ತು. ಬಡಾವಣೆಯಲ್ಲಿರುವ ಹಲವಾರು ಮನೆಗಳಿಗೆ ನೀರು ನುಗ್ಗಿತ್ತು. ಮನೆಯವರು ನೀರನ್ನು ಹೊರಹಾಕಲು ರಾತ್ರಿಯೆಲ್ಲಾ ಹರಸಾಹಸ ಪಡುವಂತಾಯಿತು.

ಬೊಮ್ಮನಹಳ್ಳಿ ವಲಯ ಬಿಬಿಎಂಪಿ ಜಂಟಿ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, “ಅನುಗ್ರಹ ಬಡಾವಣೆ ತಗ್ಗು ಪ್ರದೇಶದಲ್ಲಿದೆ. ಪ್ರತಿ ವರ್ಷ ಇಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹವಾಗುತ್ತದೆ. ಈ ಹಿಂದೆ ನೀರು ಹರಿವಿಕೆ ಕಡಿಮೆ ಪ್ರಮಾಣದಲ್ಲಿ ಇತ್ತು. ಇದೀಗ ಕಟ್ಟಡ ನಿರ್ಮಾಣ ಹೆಚ್ಚಾಗಿದೆ. ಕಾಂಕ್ರೀಟ್ ರಸ್ತೆಗಳಾಗಿವೆ. ಇದರಿಂದ ನೀರು ಹರಿಯುವ ಪ್ರಮಾಣ ಹೆಚ್ಚಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...