ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ಧಾರೆ.

ಸಂತ್ರಸ್ತ ಯುವತಿಯ ಪೋಷಕರು ನೀಡಿದ ದೂರು ಆಧರಿಸಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಹಾಗೂ ಸಹಚರ ಅನೂಪ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.

ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಉಪನ್ಯಾಸಕ ನೋಟ್ಸ್ ನೀಡುವ ನೆಪದಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದರು. ಬಳಿಕ ಮೊಬೈಲ್ ನಂಬರ್ ಪಡೆದು ಯುವತಿ ಜೊತೆ ಚಾಟ್ ಮಾಡಲು ಆರಂಭಿಸಿದ್ದರು. ಕ್ರಮೇಣ ಸ್ನೇಹ ಬೆಳೆಸಿ ಬಳಿಕ ಮಾರತಹಳ್ಳಿಯಲ್ಲಿರುವ ಸ್ನೇಹಿತನ ರೂಮ್​ಗೆ ಕರೆತಂದು ಅತ್ಯಾಚಾರವೆಸಗಿದ್ದರು. ಬಳಿಕ ಕೃತ್ಯದ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ಧಾರೆ.

Advertisements
ಮೂವರು
ಆರೋಪಿಗಳಾದ ಅನೂಪ್, ಸಂದೀಪ್ ಹಾಗೂ ನರೇಂದ್ರ

ಕೆಲ ದಿನಗಳ ಬಳಿಕ ಜೀವಶಾಸ್ತ್ರ ವಿಷಯದ ಉಪನ್ಯಾಸಕನಿಗೆ ಇನ್ನೊಬ್ಬ ಉಪನ್ಯಾಸಕ ವಿಷಯ ತಿಳಿಸಿದ್ದರು. ಆ ಬಳಿಕ ಆ ಉಪನ್ಯಾಸಕ ಕೂಡ ಯುವತಿಯನ್ನ ಸಂಪರ್ಕಿಸಿ, ನಿನ್ನ ಫೋಟೊ ಹಾಗೂ ವಿಡಿಯೋ ಇದೆ ಎಂದು ಬೆದರಿಸಿದ್ದರು. ನಂತರ ವಿದ್ಯಾರ್ಥಿಯನ್ನು ಖಾಸಗಿ ಕಂಪನಿಯ ಉದ್ಯೋಗಿಯ ಮಾಲೀಕತ್ವದ ರೂಮ್​ಗೆ ಕರೆತಂದು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಉಪನ್ಯಾಸಕರಿಗೆ ಕಾಮನ್ ಫ್ರೆಂಡ್ ಆಗಿದ್ದ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೂಪ್, ಯುವತಿಯನ್ನ ಉದ್ದೇಶಿಸಿ ಇಬ್ಬರೊಂದಿಗೆ ನೀನು ಮನೆಗೆ ಬಂದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತನ್ನೊಂದಿಗೆ ಸಹಕರಿಸದಿದ್ದರೆ ವಿಡಿಯೋ ಹರಿಬಿಡುವುದಾಗಿ ಬೆದರಿಕೆವೊಡ್ಡಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ: ಬೆಂವಿವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಚಂದ್ರು ಪೆರಿಯಾರ್ ಆಗ್ರಹ

ಆರೋಪಿಗಳ ಹೇಯ ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಮನನೊಂದಿದ್ದಳು. ಕೆಲ ದಿನಗಳ ಹಿಂದೆ ಕೃತ್ಯದ ಬಗ್ಗೆ ಪೋಷಕರಿಗೆ ಹೇಳಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ಪೋಷಕರು ದೂರು ನೀಡಿದ್ದರು.

ಸಂತ್ರಸ್ತೆಯನ್ನ ಕೌನ್ಸೆಲಿಂಗ್​ ನಡೆಸಿ ಆಯೋಗವು ಮಾರತಹಳ್ಳಿ ಪೊಲೀಸರಿಗೆ ದೂರು ನೀಡಿತ್ತು. ದೂರು ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

Download Eedina App Android / iOS

X