ಬೆಂಗಳೂರು ಗ್ರಾಮಾಂತರ | ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆ; ₹30 ಲಕ್ಷ ನಗದು ಕಳ್ಳತನ

Date:

Advertisements

ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆ ಮಾಡಿರುವ ಖದೀಮರು ₹30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಮಾರ್ಚ್ 1ರ ಮುಂಜಾನೆ 3ರ ಸಮಯದಲ್ಲಿ ಕೃತ್ಯ ನಡೆದಿದೆ. ಆಂಧ್ರಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿರುವ ಖದೀಮರು, ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷೀನನ್ನು ಕತ್ತರಿಸಿ ಅದರದಲ್ಲಿದ್ದ ₹30 ಲಕ್ಷ ನಗದನ್ನು ದೋಚಿದ್ದಾರೆ.

ಗುರುತು ಸಿಗಬಾರದೆಂಬ ಕಾರಣಕ್ಕೆ ಸಿಸಿ ಕ್ಯಾಮೆರಾಕ್ಕೆ ಸ್ಪ್ರೇ ಮಾಡಿದ್ದು, ಎಟಿಎಂನಿಂದ ₹30 ಲಕ್ಷ ಹಣ ದೋಚಿದ್ದಾರೆ. ಕಳವು ಮಾಡಿದ ನಂತರ ಹೊಸಕೋಟೆ ಮಾರ್ಗವಾಗಿ ಕಳ್ಳರು ಪರಾರಿಯಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ

ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X