ಬೆಂಗಳೂರು ಗ್ರಾಮಾಂತರ | ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಸಾರ್ವಜನಿಕ ವಲಯದಲ್ಲಿ ಟೀಕೆ

Date:

Advertisements

ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊರವಲಯದಲ್ಲಿರುವ ಬಾವಿಕೆರೆ ಗ್ರಾಮದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಬಿಜೆಪಿ ಜೆಡಿಎಸ್ ಮುಖಂಡರು ಭಾನುವಾರ ಆಯೋಜಿಸಿದ್ದ ಮೈತ್ರಿಹಬ್ಬ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸುಮಾರು ₹20 ಲಕ್ಷದ ಮದ್ಯ ಹಂಚಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಮಾಜಿ ಶಾಸಕ ಎಂ ವಿ ನಾಗರಾಜು, ಜೆಡಿಎಸ್ ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ, ಬಿಜೆಪಿ ಮುಖಂಡ ಜಗದೀಶ್ ಚೌದರಿ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜನರಿಗೆ ಮದ್ಯ ಹಂಚಿಕೆ ಮಾಡಲು ಅಬಕಾರಿ ಇಲಾಖೆ ಅನುಮತಿಯನ್ನೂ ಪಡೆದಿದ್ದಾರೆ.

Advertisements

ಕಾರ್ಯಕ್ರಮದ ಜಾಗದಲ್ಲಿ ಮಾತ್ರ ಮದ್ಯ ಹಂಚಿಕೆಗೆ ಅನುಮತಿ ನೀಡಲಾಗಿತ್ತು. ಅನುಮತಿಯನ್ನು ಮೀರಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಮಾಡಲಾಗಿದೆ ಎನ್ನಲಾಗಿದ್ದು, ಸಾರ್ವಜನಿಕರ ವಿರೋಧಕ್ಕೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು: ಚಿಂತಕ ಕೆ ದೊರೈರಾಜ್

ಈ ಕುರಿತು ಈ ದಿನ.ಕಾಮ್‌ ಬೆಂಗಳೂರು ಗ್ರಾಮಾಂತರ ಅಬಕಾರಿ ಡಿಎಸ್‌ಪಿಯವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಅಭಿನಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲವು ಷರತ್ತುಗಳೊಂದಿಗೆ ಒಂದು ದಿನದ ಮಟ್ಟಿಗೆ ಮದ್ಯ ಹಂಚಿಕೆಗೆ ಅನುಮತಿ ನೀಡಲಾಗಿತ್ತು. ಇಲಾಖೆ ಅನುಮತಿ ಮೇರೆಗೆ ಕಾರ್ಯಕ್ರಮಗಳಲ್ಲಿ ಮದ್ಯ ಹಂಚಲು ಎಲ್ಲರಿಗೂ ಅವಕಾಶ ಇದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇಂಥಾ ಜನಪ್ರತಿನಿಧಿಗಳು ಅವ್ರಿಗೆ ತಕ್ಕಂತೆ ಪ್ರಜೆಗಳು ದೇಶ ಉದ್ಧಾರ ಆದಂತೆ,, ಶಿಸ್ತು ಸಂಸ್ಕಾರವಂತ ಪಕ್ಷದ ಸಂಸದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X