ಬೆಂಗಳೂರು ಗ್ರಾಮಾಂತರ | ಸಂತೆ ಮೈದಾನದಲ್ಲಿ ಮೂಲಸೌಕರ್ಯ ಮರೀಚಿಕೆ; ವ್ಯಾಪಾರಿಗಳ ಅಳಲು

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ (ದೇವನಹಳ್ಳಿ) ಪಟ್ಟಣದಲ್ಲಿ ಪ್ರತಿ ಶುಕ್ರವಾರ ಸಂತೆ ನಡೆಯುತ್ತಿದೆ. ಆದರೆ, ಸಂತೆ ನಡೆಯುವ ಮೈದಾನದಲ್ಲಿ ಅಗತ್ಯ ಮೂಲ ಸೌಕರ್ಯ ಇಲ್ಲದೆ ವ್ಯಾಪಾರಿಗಳು ಹಾಗೂ ಗ್ರಾಹಕರು ನಲುಗುತ್ತಿದ್ದು, ಸಂತೆ ನಡೆಯಲು ಬೇಕಾದ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ವಿದ್ಯುತ್ ದೀಪ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ವಿಜಯಪುರ ಪಟ್ಟಣದ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

“ವಾರಕ್ಕೊಮ್ಮೆ ಇಲ್ಲಿ ಸಂತೆ ನಡೆಯುತ್ತದೆ. ಸಂಜೆ ಸಮಯ ಹೆಚ್ಚು ವ್ಯಾಪಾರ ಆಗುತ್ತದೆ. ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಸಂಜೆಯ ಹೊತ್ತಿನಲ್ಲಿ ಬರುತ್ತಾರೆ. ಇಲ್ಲಿ ಎಪಿಎಂಸಿಯಿಂದ ಸಂತೆ ಮಳಿಗೆ ನಿರ್ಮಾಣ ಮಾಡಿದ್ದಾರೆ. ಆದರೆ, ವಿದ್ಯುತ್ ಸಂಪರ್ಕವಿಲ್ಲ. ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ಸಂಜೆಯಾದರೆ ಕತ್ತಲಲ್ಲಿ ವ್ಯಾಪಾರ ಮಾಡಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ” ಎಂದು ವ್ಯಾಪಾರಿಯೊಬ್ಬರು ಅವಲತ್ತುಕೊಂಡಿದ್ದಾರೆ.

Advertisements

“ಮಹಿಳಾ ವ್ಯಾಪಾರಿಗಳು ಬೆಳಗಿನಿಂದ ರಾತ್ರಿಯವರೆಗೂ ಇಲ್ಲೇ ಇರುತ್ತೇವೆ. ಶೌಚಾಲಯದ ವ್ಯವಸ್ಥೆ ಇಲ್ಲ. ಒಂದೊಂದು ಅಂಗಡಿಗೆ ₹120 ಸುಂಕ ಕಟ್ಟುತ್ತೇವೆ. ಮಳೆ ಬಂದರೆ, ಮಳೆ ನೀರು ನಿಂತುಕೊಳ್ಳುತ್ತೆ. ಇದರಿಂದ ಗ್ರಾಹಕರು ಅಂಗಡಿಗಳ ಕಡೆಗೆ ಬರುವುದಿಲ್ಲ. ವಾಹನದಲ್ಲಿ ತರಕಾರಿ ತರುವುದಕ್ಕೂ ಸಾಧ್ಯವಾಗುತ್ತಿಲ್ಲ” ಎಂದು ಮಹಿಳಾ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಬಗ್ಗೆ ಸುಂಕ ಕಟ್ಟಿಸಿಕೊಳ್ಳುವವರನ್ನು ಕೇಳಿದರೆ, ನಾವು ₹5 ಲಕ್ಷ ಬಂಡವಾಳ ಹಾಕಿದ್ದೇವೆ. ಅದಕ್ಕಾಗಿ ಸುಂಕ ವಸೂಲಿ ಮಾಡಿಕೊಳ್ಳುತ್ತಿದ್ದೇವೆ. ನೀವು ಪುರಸಭೆಯವರನ್ನು ಕೇಳಿ ಎನ್ನುತ್ತಾರೆ. ಪುರಸಭೆಯವರು ನಮಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಕೂಡಲೇ  ಶೌಚಾಲಯ ವ್ಯವಸ್ಥೆ ಒದಗಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

“ಸಂಜೆ ವೇಳೆ ಕತ್ತಲಿರುವ ಕಾರಣ, ನಾವು ಚಾರ್ಜಿಂಗ್ ಲೈಟ್‌ ಇಟ್ಟುಕೊಳ್ಳುತ್ತಿದ್ದೇವೆ. ಆದರೆ, ನಮ್ಮ ಅಂಗಡಿಗಳ ಕಡೆಗೆ ಬರಲು ಸಾಧ್ಯವಾಗದ ಕಾರಣ ಗ್ರಾಹಕರು, ಬೆಳಕಿರುವ ಕಡೆಯಲ್ಲೆ ತರಕಾರಿ ಖರೀದಿಸಿ ಹೋಗುತ್ತಾರೆ. ಇದರಿಂದ  ನಿತ್ಯ ನಷ್ಟ ಉಂಟಾಗುತ್ತಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳು ಯಾರೂ ಈವರೆಗೂ ದೂರು ನೀಡಿರಲಿಲ್ಲ. 6 ತಿಂಗಳ ಹಿಂದೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಕೆಲವರು ರಾತ್ರಿಯ ವೇಳೆ ಬಂದು ವಿದ್ಯುತ್ ದೀಪಗಳನ್ನು ಹೊಡೆದು ಹಾಕಿದ್ದಾರೆ. ಚುನಾವಣೆ ಮುಗಿದ ಕೂಡಲೇ ಸಂತೆ ಮೈದಾನಕ್ಕೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲಾಗವುದು” ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ತಿಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X