ಬೆಂಗಳೂರು | ವರ್ತೂರು ಕೆರೆಗೆ ಸೇರುತ್ತಿರುವ ಕೊಳಚೆ ನೀರು; ಮೀನುಗಳ ಮಾರಣಹೋಮ

Date:

Advertisements

ಮಹದೇವಪುರ ವಲಯದ ಬಸವನಪುರ, ವರ್ತೂರು ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತಿರುವುದರಿಂದ ಕೆರೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಳೆದ 3-4 ದಿನಗಳಿಂದ ಕೆರೆಯ ಒಳಹರಿವಿನ ಬಳಿ ಇರುವ ಯುಜಿಡಿ ಚೇಂಬರ್‌ನಲ್ಲಿ ಯುಜಿಡಿ ನೀರು ಕೆರೆಗೆ ಸೇರುತ್ತಿದೆ. ಇದರಿಂದ ಕೆರೆಯ ನೀರು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ. ಯುಜಿಡಿ ಲೈನ್ ಬ್ಲಾಕ್ ಆಗಿರುವುದು ಮತ್ತು ನೀರು ತುಂಬಿ ಹರಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆರೆಯ ನೀರಿನ ಬಣ್ಣ ಬದಲಾಗಿದೆ. ಕೊಳಚೆ ನೀರು ಕೆರೆಗೆ ಸೇರುತ್ತಿರುವುದರಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿವೆ. ಈಗಾಗಲೇ ಕೆರೆಯ ಮೇಲೆ ಸತ್ತ ಮೀನುಗಳು ತೇಲುತ್ತಿರುವುದನ್ನು ಕಾಣಬಹುದು” ಎಂದು ಕೆರೆ ಕಾರ್ಯಕರ್ತ ಬಾಲಾಜಿ ರಘೋತ್ತಮ್ ಬಾಲಿ ತಿಳಿಸಿದರು.

“ಇದು ಹೀಗೆ ಮುಂದುವರೆದರೆ ಕೆರೆಯಲ್ಲಿರುವ ಮೀನುಗಳು 2-3 ದಿನಗಳಿಗಿಂತ ಹೆಚ್ಚು ಕಾಲ ಬದುಕುಳಿಯುವುದಿಲ್ಲ. ಕೆರೆಯಲ್ಲಿರುವ ಸಂಪೂರ್ಣ ಮೀನುಗಳು ಸಾವನ್ನಪ್ಪುತ್ತವೆ. 13 ವರ್ಷಗಳ ಹೋರಾಟದ ನಂತರ, ಕೆರೆಯನ್ನು ನವೀಕರಿಸಲಾಯಿತು. ಆದರೆ, ಇಂತಹ ಮಾಲಿನ್ಯದ ಘಟನೆಗಳು ನಿಜವಾಗಿಯೂ ನೋವುಂಟು ಮಾಡುತ್ತವೆ” ಎಂದು ಹೇಳಿದರು.

Advertisements

”ಮಳೆ ಬಂದಾಗ ಸ್ವಯಂಚಾಲಿತವಾಗಿ ಕೊಳಚೆ ನೀರು ಕೆರೆ ಸೇರುತ್ತದೆ. ಭಾರೀ ಮಳೆಯಾದರೆ, ನೀರು ಚಲಿಸುತ್ತಲೇ ಇರುತ್ತದೆ. ಶುದ್ಧ ನೀರಿನೊಂದಿಗೆ ಕೊಳಚೆ ನೀರು ಸೇರಿಕೊಳ್ಳುತ್ತದೆ. ಯುಜಿಡಿ ಚೇಂಬರ್‌ ಸಮಸ್ಯೆಯಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಮೂಲಕ ಕೊಳಚೆ ನೀರು ಕೆರೆಗೆ ಸೇರದಂತೆ ಸರಿಪಡಿಸಬೇಕಾಗಿದೆ. ನಾವು ಆಗಾಗ ಹೋಗಿ ಕೆರೆಯನ್ನು ಸ್ವಚ್ಛಗೊಳಿಸುತ್ತೇವೆ. ಆದರೆ, ಇಂತಹ ಸಂಗತಿಗಳು ಸಾಮಾನ್ಯ” ಎಂದು ಕೆರೆ ನಿರ್ವಹಣೆ ಗುತ್ತಿಗೆದಾರರೊಬ್ಬರು ತಿಳಿಸಿದರು

ವರ್ತೂರು ಕೆರೆಯಲ್ಲಿ ಕೆಲವು ದಿನಗಳ ಹಿಂದೆ ತಿರುವು ಕಾಲುವೆ ಒಡೆದಿದ್ದರಿಂದ ಮೇಲ್ದಂಡೆಯ ಕೊಳಚೆ ನೀರು ಕೆರೆಗೆ ಸೇರುತ್ತಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಅಗ್ನಿ ಅವಘಡ ಪರಿಶೀಲನೆ; ಇಲ್ಲಿಯವರೆಗೂ 48 ರೆಸ್ಟೋರೆಂಟ್‌ ಬಂದ್​

“ವರ್ತೂರು, ಬೆಳ್ಳಂದೂರು ಕೆರೆಗಳ ರಕ್ಷಣೆಗಾಗಿ 20 ವರ್ಷಗಳಿಂದ ನಾಗರಿಕರು ಹೋರಾಟ ನಡೆಸುತ್ತಿದ್ದಾರೆ. ಕೆರೆಗಳನ್ನು ಮರುಸ್ಥಾಪಿಸಲು ನಮ್ಮ ಹೋರಾಟದ ಹೊರತಾಗಿಯೂ ಕಲುಷಿತವಾಗುತ್ತಿರುವುದನ್ನು ನೋಡುವುದು ತುಂಬಾ ಬೇಸರ ತಂದಿದೆ. ಇತ್ತೀಚೆಗೆ ಕೆರೆ ಒಡೆದ ಕಾರಣ ಕೊಳಚೆ ನೀರು ಕೆರೆಗೆ ನುಗ್ಗಿ ಸಾಕಷ್ಟು ಮೀನುಗಳು ಸಾವನ್ನಪ್ಪಿವೆ. ಡೈವರ್ಶನ್ ಚಾನಲ್ ಅನ್ನು ಸರಿಪಡಿಸಲು ಕನಿಷ್ಠ ಒಂದು ವಾರದ ಸಮಯ ಬೇಕಾಯಿತು” ಎಂದು ಕೆರೆ ಹೋರಾಟಗಾರ ಜಗದೀಶರೆಡ್ಡಿ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X