ಬೆಂಗಳೂರು | ಶಕ್ತಿ ಯೋಜನೆ; ಯಾತ್ರಾ ಸ್ಥಳಗಳಿಗೆ ತೆರಳಲು ಮುಂಗಡ ಕಾಯ್ದಿರಿಸಲು ವಿಚಾರಣೆ

Date:

Advertisements

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (ಶಕ್ತಿ ಯೋಜನೆ) ಜಾರಿಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಮಹಿಳೆಯರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತೆಯೇ ತಮ್ಮವರೆಲ್ಲ ಒಟ್ಟಾಗಿ ಯಾತ್ರಾ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಕಾಯ್ದಿರಿಸಬಹುದಾ? ಎಂದು ಮಹಿಳೆಯೊಬ್ಬರು ವಿಚಾರಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸಿ ಸುನಂದಾ ಎಂಬುವವರು ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ವಿಚಾರಣಾ ಕೌಂಟರ್‌ಗೆ ಬಂದು ಒಂದು ಬಸ್‌ನ 48 ಸೀಟುಗಳನ್ನು ಮುಂಗಡ ಕಾಯ್ದಿರುವ ಕುರಿತು ವಿಚಾರಿಸಿದ್ದಾರೆ. ಯಾವ್ಯಾವ ಮಾರ್ಗಗಳಿಗೆ ಎಷ್ಟು ಗಂಟೆಗೆ ಬಸ್‌ಗಳ ವ್ಯವಸ್ಥೆಯಿದೆ ಎಂದು ಪೇಪರ್‌ನಲ್ಲಿ ಬರೆದುಕೊಂಡು ಹೋಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ; ಕೇಂದ್ರ ಸಚಿವರಿಗೆ ಪತ್ರ

Advertisements

ನಾಲ್ಕರಿಂದ ಐದು ದಿನಗಳ ಕಾಲ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ತೆರಳಲು ಸುಮಾರು 20 ಜನರ ತಂಡವನ್ನು ಮಾಡಿಕೊಂಡಿದ್ದಾರೆ. ಮನೆಯ ಮಹಿಳಾ ಕುಟುಂಬಸ್ಥರು ಹಾಗೂ ಮಹಿಳಾ ಸಂಘ ಸಂಸ್ಥೆಯವರು ಸೇರಿ ಇನ್ನೂ 20 ಜನರನ್ನು ಒಗ್ಗೂಡಿಸಿ ಒಟ್ಟು 48 ಜನರಿಗೆ ಸೀಟುಗಳನ್ನು ಕಾಯ್ದಿರಿಸಲು ಸಾಧ್ಯವಾ? ಎಂದು ವಿಚಾರಿಸಲು ಬಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X