ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆಗೈದ ಸೊಸೆ

Date:

Advertisements

ಗಂಡನ ಮನೆಯ ಹಣಕಾಸಿನ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್ ಬಂಧಿತರು. ಲಕ್ಷ್ಮಮ್ಮ (50) ಕೊಲೆಯಾದ ದುರ್ದೈವಿ.

ಮೂವರು ಆರೋಪಿಗಳು ಸೇರಿ, ಅಕ್ಟೋಬರ್ 5ರಂದು ಲಕ್ಷ್ಮಮ್ಮ (50) ಎಂಬವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ, ಹೃದಯಾಘಾತವಾಗಿದೆ ಎಂದು ಎಲ್ಲರನ್ನು ನಂಬಿಸಿದ್ದರು. ಆರೋಪಿಗಳ ವಾಟ್ಸ್‌ಆಪ್ ಚಾಟಿಂಗ್‌ನಿಂದ ಸತ್ಯ ಬಯಲಾಗಿದೆ.

Advertisements

ಏನಿದು ಪ್ರಕರಣ?

ಆರೋಪಿ ರಶ್ಮಿಗೆ ಮಂಜುನಾಥ್ ಎಂಬಾತನೊಂದಿಗೆ ಮದುವೆ ಆಗಿತ್ತು. ಇವರ ಮನೆಯ ಮೇಲೆ ಬಾಡಿಗೆಗೆ ಇದ್ದ ಆರೋಪಿ ಅಕ್ಷಯ್ ಜತೆಗೆ ರಶ್ಮಿ ಸಂಬಂಧ ಹೊಂದಿದ್ದಳು.

ಮನೆಯ ಸಂಪೂರ್ಣ ವ್ಯವಹಾರವನ್ನು ಮಂಜುನಾಥ್ ಅವರ ತಾಯಿ ಲಕ್ಷ್ಮಮ್ಮ ನೋಡಿಕ್ಕೊಳ್ಳುತ್ತಿದ್ದರು. ಈ ವಿಚಾರವಾಗಿ ಪದೇಪದೇ ಅತ್ತೆ-ಸೊಸೆಯ ನಡುವೆ ಕಿತ್ತಾಟ ಉಂಟಾಗುತ್ತಿತ್ತು. ಮನೆಯ ಸಂಪೂರ್ಣ ಜವಾಬ್ದಾರಿ ತಾನೇ ತೆಗೆದುಕೊಳ್ಳಬೇಕು ಎಂಬ ಆಸೆಯಿಂದ ರಶ್ಮಿ ತನ್ನ ಅತ್ತೆಯನ್ನು ಸಾಯಿಸಲು ಉಪಾಯ ಹೂಡಿದ್ದಾಳೆ.

ತನ್ನ ಪ್ರಿಯಕರ ಅಕ್ಷಯ್ ಜತೆಗೆ ಸೇರಿ ರಶ್ಮಿ ತನ್ನ ಅತ್ತೆಯನ್ನು ಸಾಯಿಸಲು ಮುಂದಾಗುತ್ತಾಳೆ. ಅದರಂತೆಯೇ, ಅ.5 ರಂದು ರಶ್ನಿ ತನ್ನ ಗಂಡ ಮಂಜುನಾಥ್ ಮನೆಯಲ್ಲಿ ಇಲ್ಲದಾಗ ತನ್ನ ಅತ್ತೆಗೆ ಮತ್ತು ಬರುವ ಮಾತ್ರೆ ನೀಡಿದ್ದಾಳೆ.

ಬಳಿಕ, ಪ್ರಿಯಕರ ಅಕ್ಷಯ್ ಮತ್ತು ಪುರುಷೋತ್ತಮ್ ಎಂಬುವವರ ಜತೆಗೆ ಸೇರಿ ತನ್ನ ಅತ್ತೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ತನ್ನ ಅತ್ತೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಎಲ್ಲರನ್ನೂ ನಂಬಿಸಿದ್ದಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳ್ಳರ ಜತೆಗೆ ಸೇರಿ ಕಳ್ಳತನಕ್ಕಿಳಿದ ಪೊಲೀಸ್ ಪೇದೆ

ಬಯಲಾದ ಸತ್ಯ

ಅದೇ ಕಟ್ಟಡದ ಒಂದನೇ ಮಹಡಿಯಲ್ಲಿ ಬಾಡಿಗೆಗೆ ಇದ್ದ ರಾಘವೇಂದ್ರ ಎಂಬಾತ ಇವರ ವರ್ತನೆ ಬಗ್ಗೆ ಅನುಮಾನಗೊಂಡು ಆರೋಪಿ ಅಕ್ಷಯ್ ಮೊಬೈಲ್ ಪರಿಶೀಲನೆ ಮಾಡಿದ್ದಾನೆ. ಈ ವೇಳೆ, ವಾಟ್ಸ್‌ಆಪ್‌ನಲ್ಲಿ ಅಕ್ಷಯ್ ಮತ್ತು ರಶ್ಮಿ ಚಾಟಿಂಗ್‌ ಮಾಡಿರುವುದು ಕಂಡು ಬಂದಿದೆ. ಇಲ್ಲಿ ಇಬ್ಬರು ಆರೋಪಿಗಳು ಹತ್ಯೆ ಮಾಡುವುದರ ಬಗ್ಗೆ ಸಂಚು ರೂಪಿಸಿದ್ದರು.

ಇದನ್ನು ಕಂಡ ರಾಘವೇಂದ್ರ ರಶ್ಮಿ ಪತಿ ಮಂಜುನಾಥ್ ಅವರಿಗೆ ಸಾಕ್ಷಿ ಸಮೇತ ಚಾಟಿಂಗ್ ಮಾಡಿರುವುದನ್ನು ತೋರಿಸಿದ್ದಾನೆ.

ಮಂಜುನಾಥ್ ಅವರು ಸಾಕ್ಷಿ ಸಮೇತ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X