ಬೆಂಗಳೂರು | ಚುನಾವಣಾ ಕರ್ತವ್ಯದಲ್ಲಿರುವವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ; ಡಿಸಿ

Date:

Advertisements

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಅನುರಾಧ ಕೆ.ಎನ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಮಾ.20) ನಡೆದ 2024ರ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳಿಗೆ, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್.ಸಿ.ಟಿ, ಎಸ್.ಎಸ್.ಟಿ, ವಿ.ವಿ.ಟಿ ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ನಡೆದ ತರಬೇತಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾವಹಿಸಬೇಕು ಎಂದರು.

ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ ಪೋಸ್ಟ್‌ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ನಡೆಸಬೇಕು. ಚುನಾವಣೆಯು ಪ್ರಜಾಪ್ರಭುತ್ವದ ಅಂಗವಾಗಿದ್ದು, ಹಬ್ಬದ ರೀತಿಯಲ್ಲಿ ನಡೆಸೋಣ ಎಂದು ಕರೆ ನೀಡಿದರು.

Advertisements
Bose Military School

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತರಬೇತುದಾರ ಅಭಿಜಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

ಉಡುಪಿ | “ಸರ್ವರಿಗೂ ಸೂರು” ಮನೆ ನಿರ್ಮಾಣಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ...

ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ...

Download Eedina App Android / iOS

X