ಬೆಂಗಳೂರು ವಿವಿ | ಹಾಸ್ಟೆಲ್‌ಗಳ ಹಾಸಿಗೆ-ದಿಂಬು ಖರೀದಿ ಅಕ್ರಮ; ತನಿಖೆಗೆ ವಿದ್ಯಾರ್ಥಿಗಳ ಆಗ್ರಹ

Date:

  • ಬೆಂಗಳೂರು ವಿವಿಯ ಕುಲಪತಿ, ಕುಲಸಚಿವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು
  • ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಲ್ಲಿ ಅಕ್ರಮ ನಡೆದಿರುವ ಆರೋಪ

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯಗಳ ಹಾಸಿಗೆ, ದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಎಲ್ಲ ವಿದ್ಯಾರ್ಥಿನಿಲಯಗಳ ಸ್ನಾಥಕೋತ್ತರ ಪದವಿ ಮತ್ತು ಪಿ.ಎಚ್‌ಡಿ ವಿದ್ಯಾರ್ಥಿಗಳು, ಕುಲಪತಿ ಮತ್ತು ಕುಲಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

- Advertisement -

ಬೆಂಗಳೂರು ವಿಶ್ವ ವಿದ್ಯಾನಿಲಯದ ಒಂಬತ್ತು ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿದ್ದ ಹಾಸಿಗೆ, ದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದಾಗಿ ವರದಿಯಾಗಿದೆ. ಪೂರೈಕೆಗೆಂದು ಕರೆಯಲಾಗಿದ್ದ ಟೆಂಡರಲ್ಲಿ ಉಲ್ಲೇಖಿಸಲಾಗಿದ್ದ ಗುಣಮಟ್ಟವೂ ಇಲ್ಲವಾಗಿದ್ದು, ಪೂರೈಸುವುದಾಗಿ ತೋರಿಸಲಾಗಿದ್ದ ಹಾಸಿಗೆ ದಿಂಬುಗಳ ಬದಲು ಕಳಪೆ ಹಾಗೂ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಲಭ್ಯವಿರುವ ಹಾಸಿಗೆ- ದಿಂಬುಗಳನ್ನು ಪೂರೈಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2021-22ನೆ ಸಾಲಿನಲ್ಲಿ ಟೆಂಡರ್ ಕರೆಯಲಾಗಿದ್ದು, ಪ್ರತಿ ಹಾಸಿಗೆಗೆ ₹5,900 ಮತ್ತು ಪ್ರತಿ ದಿಂಬಿಗೆ ₹650 ನಿಗದಿಪಡಿಸಲಾಗಿತ್ತು. ಆದರೆ, ಮಾರುಕಟ್ಟೆಯಲ್ಲಿ ₹3,000 ಸಿಗುವ ಹಾಸಿಗೆ ಮತ್ತು ₹150 ಕ್ಕೆ ಸಿಗುವ ದಿಂಬುಗಳನ್ನು ಹೆಚ್ಚಿನ ದರದಲ್ಲಿ ಖರೀದಿಸಲಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಬೆಂಗಳೂರು ವಿವಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಲ್ಲಿ ಬೆಂಗಳೂರು ವಿವಿಯ ಒಂಬತ್ತು ವಿದ್ಯಾರ್ಥಿನಿಲಯಗಳಿಗೆ ಹಾಸಿಗೆ ಮತ್ತು ದಿಂಬು ಸರಬರಾಜು ಮಾಡುವ ಬಗ್ಗೆ ಟೆಂಡರ್ ಅನ್ನು ಪ್ರಕಟ ಮಾಡಿ, 2022ರ ಫೆ. 3ರಂದು ಎಸ್.ಎಲ್.ವಿ ಟ್ರೇಡಿಂಗ್ ಕಾರ್ಪೋರೇಶನ್‌ಗೆ ವಸ್ತುಗಳನ್ನು ಪೂರೈಕೆ ಮಾಡಲು ಆದೇಶ ನೀಡಲಾಗಿತ್ತು.

₹1,23,80,650 ಕೋಟಿ ಟೆಂಡರ್ ಇದಾಗಿದ್ದು, ಒಂಬತ್ತು ಹಾಸ್ಟೆಲ್‌ಗಳಿಗೆ 1,848 ಹಾಸಿಗೆ ಮತ್ತು 2,273 ದಿಂಬುಗಳನ್ನು ಪೂರೈಕೆ ಮಾಡುವಂತೆ ಆದೇಶ ನೀಡಲಾಗಿತ್ತು. ₹3,000 ಗಳಿಗಿಂತಲು ಕಡಿಮೆ ಬೆಲೆಯ ಪ್ರತಿ ಹಾಸಿಗೆಗೆ ₹5,900 ಬಿಲ್ ಮತ್ತು ₹150 ಪ್ರತಿ ದಿಂಬಿಗೆ ₹650 ಬಿಲ್ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ಹಗರಣವು ಒಂದು ವರ್ಷದ ಹಿಂದೆ ನಡೆದಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಬಹಿರಂಗವಾಗಿದೆ. ಟೆಂಡರ್‌ ನೀಡಿದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕ ಮತ್ತು ವಸ್ತುಗಳ ಗುಣಮಟ್ಟ ಪರೀಕ್ಷಿಸುವಲ್ಲಿ ಲೋಪವ ಎಸಗಿದ ಟೆಕ್ಟ್‌ಟೈಲ್ಸ್‌ ವಿಭಾಗದ ಪ್ರಾಧ್ಯಾಪಕ ಡಾ. ಹನುಮಂತ ನಾಯ್ಕ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...