ಬೆಂಗಳೂರು | ರಾಷ್ಟ್ರಧ್ವಜದ ನೀತಿ ಸಂಹಿತೆ ಉಲ್ಲಂಘನೆ; ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

Date:

Advertisements

ಬೆಂಗಳೂರು ನಗರಾದ್ಯಂತ ರಾಷ್ಟ್ರಧ್ವಜದ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯಕರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದಸಂಸ ಜಿಲ್ಲಾ ಸಂಚಾಲಕ ಗುಡಿಬಂಡೆ ಗಂಗಪ್ಪ ಮಾತನಾಡಿ, “ಕಳೆದ ಬಾರಿ ಕೇಂದ್ರ ಸರ್ಕಾರದ ಆದೇಶದಂತೆ 2022ರ ಆಗಸ್ಟ್‌  1, 14 ಮತ್ತು 15ರಂದು ನಗರಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಿರುವದು ಶ್ಲಾಘನೀಯ. ಆದರೆ, ಆಗಸ್ಟ್‌ 15ರ ನಂತರವೂ ಬಹುತೇಕ ಕಡೆ ರಾಷ್ಟ್ರಧ್ವಜಗಳನ್ನು ಹಾಗೆಯೇ ಬಿಟ್ಟು ಕಸದ ಗುಂಡಿಗಳಿಗೆ ಹಾಕಿ ಅವಮಾನ ಮಾಡಿದ್ದರು” ಎಂದು ಆರೋಪಿಸಿದರು.

“ಕೆಲವೆಡೆ ಈಗಲೂ ಅನಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಹಾರಿಸಲಾಗುತ್ತಿದೆ. ಹಾಗೆಯೇ ಈ ವರ್ಷವೂ ಕೂಡ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಬೀದಿಬದಿ ಮತ್ತು ವಿಧಾನಸೌಧದ ಎದುರು ರಾಷ್ಟ್ರಧ್ವಜಗಳನ್ನು ಅನಧಿಕೃತವಾಗಿ ಕೈಯಲ್ಲಿ ಹಿಡಿದುಕೊಂಡು, ನೆಲಕ್ಕೆ ಭಾಗಿಸಿ, ಬೀದಿಬದಿ ವ್ಯಾಪಾರಿಗಳು ಹಾಗೂ ಅಂಗಡಿ ಮಾಲೀಕರು ಸಾರ್ವಜನಿಕವಾಗಿ ಮಾರಾಟ ಮಾಡುತ್ತಿದ್ದು, ರಾಷ್ಟ್ರಧ್ವಜದ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

“ರಾಷ್ಟ್ರಧ್ವಜಗಳನ್ನು ಅನಧಿಕೃತ ರೀತಿಯಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರಧ್ವಜದ ಶಿಷ್ಟಾಚಾರವನ್ನು ಕಾಪಾಡುವ ಸಲುವಾಗಿ ತಾವು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X